ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಉಪನಿರೀಕ್ಷಕರ (ಪಿಎಸ್ಐ) ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ಬೃಹತ್ ಹಗರಣಗಳ ನಿಯಂತ್ರಣ ಹಾಗೂ ಸಾರ್ವಜನಿಕರೊಂದಿಗೆ ಹೆಚ್ಚು ಸಮನ್ವಯ ಸಾಧಿಸುವ ಉದ್ದೇಶದಿಂದ “ಮನೆಮನೆಗೆ ಪೊಲೀಸ್” ಎಂಬ ಹೊಸ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ:
- ಸಾರ್ವಜನಿಕರ ತೊಂದರೆಗಳನ್ನು ನೇರವಾಗಿ ಕೇಳಲು ಪೊಲೀಸರು ಮನೆಗಳಿಗೆ ಭೇಟಿ ನೀಡುತ್ತಾರೆ
- ಶಾಲಾ-ಕಾಲೇಜುಗಳಿಗೆ ಭೇಟಿಯೊಂದಿಗೆ ಕಾನೂನು ಅರಿವು ಕಾರ್ಯಕ್ರಮಗಳು ನಡೆಯುತ್ತವೆ
- ಪಾಲಕರ ಸಭೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳು ಎದುರಿಸಬಹುದಾದ ಅಪಾಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ
- ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು, ಟ್ರಾಫಿಕ್ ನಿಯಮಗಳ ಪ್ರಾಮುಖ್ಯತೆ ಇತ್ಯಾದಿ ಕುರಿತು ಜನಜಾಗೃತಿ ಮೂಡಿಸಲಾಗುವುದು
- ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು
ಇದನ್ನು ಓದಿ –ಚಿನ್ನದ ದರದಲ್ಲಿ ಇಳಿಕೆ: 24K, 22K, 18K ಚಿನ್ನದ ಬೆಲೆ ತಿಳಿಯಿರಿ
15 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ
ಪೊಲೀಸ್ ಇಲಾಖೆಯಲ್ಲಿ ಸದ್ಯದಲ್ಲಿ ಸುಮಾರು 15,000 ಹುದ್ದೆಗಳು ಖಾಲಿಯಾಗಿದ್ದು, ಅವುಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಉದ್ದೇಶವಿದೆ. ಈಗಾಗಲೇ 545 ಪಿಎಸ್ಐಗಳಿಗೆ ತರಬೇತಿ ನೀಡಲಾಗುತ್ತಿದ್ದು, ಶೀಘ್ರದಲ್ಲೇ 402 ಪಿಎಸ್ಐ ನೇಮಕಾತಿಯ ಫಲಿತಾಂಶ ಪ್ರಕಟವಾಗಲಿದೆ. ಈ ನೇಮಕಾತಿಯಲ್ಲಿ ಬೆಂಗಳೂರು ನಗರಕ್ಕೆ ಮಾತ್ರ 219 ಪಿಎಸ್ಐ ಹುದ್ದೆಗಳು ಮೀಸಲಿಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.