ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕದ ವಿಷಯವಾಗಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಚಮಕೇರಿ ಗ್ರಾಮದಲ್ಲಿ ಆಟವಾಡುವ ವೇಳೆ ಹೃದಯಾಘಾತಕ್ಕೆ ಒಳಗಾದ 9ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ.
ಮೃತ ಬಾಲಕಿ ವಿವರ: ಮೃತಳನ್ನು ರೇಣುಕಾ ಸಂಜಯ ಬಂಡಗಾರ (15) ಎಂದು ಗುರುತಿಸಲಾಗಿದೆ. ಈಕೆ ಬೇಡರಹಟ್ಟಿ ಗ್ರಾಮದವಳಾಗಿದ್ದು, ಚಮಕೇರಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಘಟನೆಯ ವಿವರ: ಶಾಲೆಯಲ್ಲಿ ಸಾಮಾನ್ಯವಾಗಿ ಆಟವಾಡುತ್ತಿದ್ದ ಸಮಯದಲ್ಲಿ ಹಠಾತ್ ಆಕೆಗೆ ಗಂಭೀರ ಹೃದಯಾಘಾತ ಸಂಭವಿಸಿದೆ. ವಿಷಯವನ್ನು ಗಮನಿಸಿದ ಶಿಕ್ಷಕರು ಹಾಗೂ ಸಿಬ್ಬಂದಿ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದರು. ಪೋಷಕರೂ ಕೂಡ ಸೇರಿಕೊಂಡು ಆಕೆಯನ್ನು ಅಥಣಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ, ದಾರಿಯಲ್ಲೇ ಬಾಲಕಿ ಕೊನೆಯುಸಿರೆಳೆದಳು.
ಪೋಷಕರ ಆಕ್ರಂದನ: ಮಗಳನ್ನು ಕಳೆದುಕೊಂಡ ಪೋಷಕರ ನೋವಿಗೆ ಮಿತಿ ಇಲ್ಲ. ತಮ್ಮ ಮಗು ನಾಳೆಯೆಲ್ಲಾ ಕನಸುಗಳನ್ನು ಕಾಣುತ್ತಿದ್ದಾಗಲೇ ಹೃದಯಾಘಾತದಂತ ದುರ್ಘಟನೆಯು ಅವರನ್ನು ನಿರಾಶೆಗೊಳಿಸಿದೆ.ಇದನ್ನು ಓದಿ –ರಾಜ್ಯದಲ್ಲಿ ಭ್ರಷ್ಟಚಾರ ಮೀತಿ ಮೀರಿದೆ: ಎಚ್.ವಿಶ್ವನಾಥ್
ಪೊಲೀಸ್ ತನಿಖೆ:
ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.