ಮೈಸೂರು: ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 83ನೇ ಜನ್ಮದಿನಾಚರಣೆ ವಿಶೇಷವಾಗಿ ನೆರವೇರಿತು.
ಶ್ರೀಗಳ ಜನ್ಮದಿನಾಚರಣೆ ಪ್ರಯುಕ್ತ ಸೋಮವಾರ ಬೆಳಿಗ್ಗೆ 8ಗಂಟೆಗೆ ಶ್ರೀ ದತ್ತ ವೆಂಕಟೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರ ಅಭಿಷೇಕ ನೆರವೇರಿಸಲಾಯಿತು. ನಂತರ ಗಣಪತಿ ಶ್ರೀಗಳನ್ನು ಅಲಂಕೃತ ಸಾರೋಟ್ ನಲ್ಲಿ ಪ್ರಾರ್ಥನಾ ಮಂದಿರದಿಂದ ನಾದಮಂಟಪದವರೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.
ನಾದ ಮಂಟಪದಲ್ಲಿ ಶ್ರೀ ಚಕ್ರಪೂಜೆ ನೆರವೇರಿಸಿ, ನಂತರ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಪ್ರತ್ಯಕ್ಷ ಪಾದ ಪೂಜೆಯನ್ನು ಅವಧೂತ ದತ್ತಪೀಠದ ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ನೆರವೇರಿಸಿ, ಪುಷ್ಪ ನಮನ ಸಲ್ಲಿಸಿದರು.
ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಜನುಮದಿನದ ಸಂದರ್ಭವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿ ಗೌರವ ಸಮರ್ಪಿಸಿದ್ದು ನಿಜಕ್ಕೂ ವಿಶೇಷವಾಗಿತ್ತು, ಆರ್ ಬಿ ಐನ ಹೈದರಾಬಾದ್ ಶಾಖೆಯ ವ್ಯವಸ್ಥಾಪಕ ಪಿ.ವಿಜಯಲಕ್ಷ್ಮಿ ನಾಣ್ಯಗಳನ್ನು ಸ್ವಾಮೀಜಿಯವರಿಗೆ ಸಮರ್ಪಿಸಿದರು. ಇದನ್ನು ಓದಿ –ಮೇ.28, 29ಕ್ಕೆ ಪ್ರೊ.ಕೆ.ಎಸ್.ರಂಗಪ್ಪ ಜನ್ಮ ದಿನಕ್ಕೆ ವಿಚಾರ ಸಂಕಿರಣ
ಈ ಸಂದರ್ಭದಲ್ಲಿ ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದ ಗಣಪತಿ ಶ್ರೀಗಳು, ಹರೀಃಓಂ ನಮಃಶಿವಾಯ ಮಂತ್ರ ಪಠಣ ಮಾಡಿದರೆ ಎಲ್ಲರಿಗೂ ಒಳಿತಾಗಲಿದೆ ಬೇರೆಯವರಿಗೆ ಅನ್ಯಾಯ ಮಾಡಬಾರದು ಎಂದು ತಿಳಿ ಹೇಳಿದರು.