ಗದಗ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ ಸೇರಿದಂತೆ ಆರು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ಎಸ್ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ನಡೆದ ಈ ದಾಳಿ ಗದಗ, ಹಡಗಲಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಶಿರೋಳ ಅವರಿಗೆ ಸೇರಿದ ಮನೆ, ಕಚೇರಿ ಹಾಗೂ ಇತರೆ ಚಲನೆ ಮತ್ತು ಅಚಲ ಆಸ್ತಿಗಳ ಮೇಲೆ ನಡೆಯಿತು.
ದಾಳಿಯ ವೇಳೆ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು, ಅನೇಕ ಆಸ್ತಿ ದಾಖಲೆಗಳು ಮತ್ತು ವಾಹನಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.ಇದನ್ನು ಓದಿ –ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ
ಲೋಕಾಯುಕ್ತ ದಾಳಿ ವೇಳೆ ಇನ್ನಷ್ಟು ವಿವರಗಳು ಲಭ್ಯವಾಗಬೇಕಿದ್ದು, ಮುಂದಿನ ತನಿಖೆಯಿಂದ ಅಕ್ರಮ ಆಸ್ತಿಗಳ ಸಂಪೂರ್ಣ ವಿವರ ಬಹಿರಂಗವಾಗುವ ನಿರೀಕ್ಷೆಯಿದೆ.