ಮಂಡ್ಯ: ಮದುವೆಯಾಗಲು ನಿರಾಕರಿಸಿದ ಯುವತಿಯ ಹಿಂದೆ ಬಿದ್ದು, ನಿರಂತರ ಕಿರುಕುಳ ನೀಡಿ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣ ವಿರುದ್ಧ ಮಂಡ್ಯ ಜಿಲ್ಲೆಯ ಕೆರಗೋಡು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆ ನೀಡಿದ ದೂರಿನಂತೆ, ನಾಲ್ಕು ವರ್ಷಗಳ ಹಿಂದೆ ಬಾಲಕೃಷ್ಣ ಮತ್ತು ಯುವತಿಯ ಮದುವೆ ನಿಶ್ಚಯವಾಗಿತ್ತು. ಆದರೆ ಬಾಲಕೃಷ್ಣ ಯುವತಿಗೆ ಸುಳ್ಳು ಮಾಹಿತಿ ನೀಡಿ ಮದುವೆ ನಿಶ್ಚಯ ಮಾಡಿಕೊಂಡಿದ್ದ ವಿಷಯ ಯುವತಿಯ ಕುಟುಂಬಕ್ಕೆ ಗೊತ್ತಾದ ನಂತರ, ಯುವತಿ ಮದುವೆಗೆ ನಿರಾಕರಿಸಿದ್ದಳು.
ಈ ನಿರಾಕರಣೆಯಿಂದ ಕೋಪಗೊಂಡ ಬಾಲಕೃಷ್ಣ ಯುವತಿಯ ಮೇಲೆ ನಿರಂತರವಾಗಿ ಮಾನಸಿಕ ಒತ್ತಡ ತರುತ್ತಾ, ಮದುವೆ ನಿಶ್ಚಯಗಳನ್ನು ಅಡ್ಡಿಪಡಿಸುತ್ತಾ, ಬೆದರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಅವಮಾನಿಸುತ್ತಾ, ಇದೀಗ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.ಇದನ್ನು ಓದಿ –ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
ಯುವತಿ ಈ ಹಿನ್ನೆಲೆಯಲ್ಲಿ ನೊಂದ ಸ್ಥಿತಿಯಲ್ಲಿ ಕೆರಗೋಡು ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಂತ್ರಸ್ತೆಯ ಸುರಕ್ಷತೆ ಹಾಗೂ ನ್ಯಾಯಕ್ಕೆ ನ್ಯಾಯದಾಯಿಯಾಗಿ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.