ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಂಟೇನರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ನಡೆದಿದೆ. ದಾಬಸಪೇಟೆಯ ಎಂ.ಇ ಸೌಲಾರ್ ಪ್ಲಾಂಟ್ನಲ್ಲಿ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ, ತುಮಕೂರು ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಸಾವನ್ನಪ್ಪಿದವರು:
- ರಾಜೇಶ್ (25)
- ಧನಂಜಯ್ (27)
- ಧನುಷ್ (23)
ಘಟನೆ ಸ್ಥಳಕ್ಕೆ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್ ಮತ್ತು ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ:
ಕಲಬುರಗಿಯ ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ಮತ್ತೊಂದು ಮರುಳುಗೊಳಿಸುವ ಘಟನೆ ನಡೆದಿದೆ. ಕುರಿ ಮೇಯಿಸುತ್ತಿದ್ದ ವೇಳೆ ಬಾವಿಗೆ ಕಾಲು ಜಾರಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಮೃತ ಬಾಲಕರು ಸಹೋದರರಾದವರು:
- ಕುಶಾಲ್ ಚನ್ನಪ್ಪ (8)
- ರಾಜು ಚನ್ನಪ್ಪ (14)
ಇದನ್ನು ಓದಿ –ಆರ್ಬಿಐ REPO ದರ ಶೇ. 5.50ಕ್ಕೆ ಇಳಿಕೆ
ಪಟ್ಟಣದ ಮಿನಿ ವಿಧಾನಸೌಧ ಸಮೀಪದ ಬಾವಿಯ ಬಳಿ ಕುರಿ ಮೇಯಿಸುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಕೆಲ ಹೊತ್ತಿನ ಬಳಿಕ ಸ್ಥಳೀಯರಿಗೆ ಮಾಹಿತಿ ದೊರೆತಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಶವಗಳನ್ನು ಹೊರತೆಗೆಯಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.