ಬೆಂಗಳೂರು, ಜೂನ್ 9: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧವಾಗಲಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದುವರೆಗೆ ದೇವಾಲಯಗಳಲ್ಲಿ ಬಳಸಲಾಗುತ್ತಿದ್ದ ನೀರಿನ ಬಾಟಲ್, ಪ್ಲಾಸ್ಟಿಕ್ ಕವರ್ ಅಥವಾ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಮುಂದಿನಿಂದ ಬಳಸುವುದಕ್ಕೆ ಅವಕಾಶವಿಲ್ಲ” ಎಂದು ಘೋಷಿಸಿದರು.
ಈ ನಿರ್ಧಾರವನ್ನು ಜಾರಿಗೊಳಿಸಲು ಎರಡು ತಿಂಗಳ ಕಾಲಾವಕಾಶವಿದ್ದು, ಆಗಸ್ಟ್ 15ರಿಂದ ಈ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ. ಈಗಾಗಲೇ ದೇವಾಲಯಗಳಲ್ಲಿ ಇರುವ ಪ್ಲಾಸ್ಟಿಕ್ ವಸ್ತುಗಳನ್ನು ಈ ಅವಧಿಯೊಳಗೆ ತೆಗೆದುಹಾಕಬೇಕು ಎಂದು ಸಚಿವರು ಸೂಚಿಸಿದರು.ಇದನ್ನು ಓದಿ –ಚಿನ್ನದ ದರ ಭಾರೀ ಇಳಿಕೆ :ಇಂದಿನ ಚಿನ್ನದ ದರ ತಿಳಿಯಿರಿ
ಈ ಕ್ರಮದಿಂದ ದೇವಾಲಯದ ಪರಿಸರವನ್ನು ಸ್ವಚ್ಛವಾಗಿಡಲು ಸಹಕಾರಿಯಾಗಲಿದೆ ಎಂದು ಅವರು ನಂಬಿಕೆ ವ್ಯಕ್ತಪಡಿಸಿದರು.