ಅಹಮದಾಬಾದ್, ಜೂನ್ 13 – ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾದ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಧಾನಿ ಮೋದಿ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಪಘಾತದ ನಿಖರ ಮಾಹಿತಿ ಪಡೆದುಕೊಂಡು ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಅಪಘಾತದಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಭೇಟಿಯಾಗುವ ಮೂಲಕ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರು, ಚಿಕಿತ್ಸೆ ಸಿಗುವಂತೆ ಸೂಚನೆ ನೀಡಿದರು.
ಇದೇ ಅಪಘಾತದಲ್ಲಿ ದುರ್ಮರಣಕ್ಕೀಡಾದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರ ನಿವಾಸಕ್ಕೂ ಅವರು ಭೇಟಿ ನೀಡಿ, ಶೋಕಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಇದನ್ನು ಓದಿ –ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು: ಸಾವಿನ ಸಂಖ್ಯೆ 130 ಕ್ಕೆ ಏರಿಕೆ
ಘಟನೆಯು ದೇಶದಾದ್ಯಂತ ಆಘಾತ ಮೂಡಿಸಿದೆ. ಘಟನೆಯ ತನಿಖೆ ನಿಖರವಾಗಿ ನಡೆಯಬೇಕು ಎಂಬುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.