ಚನ್ನಪಟ್ಟಣ, ಜೂನ್ 14 – ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮಿ (ವಯಸ್ಸು 20) ಎಂದು ಗುರುತಿಸಲಾಗಿದೆ. ಮಹಾಲಕ್ಷ್ಮಿ ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಮಹಾಲಕ್ಷ್ಮಿಯು ಸಂಜೆಯ ವೇಳೆಗೆ ಸಿಂಗರಾಜಿಪುರ ಕೆರೆಯ ದಡದಲ್ಲಿ ಅವರ ಐಡಿ ಕಾರ್ಡ್ ಮತ್ತು ಬ್ಯಾಗ್ ಪತ್ತೆಯಾಗಿದ್ದು, ಇದರಿಂದ ಶಂಕೆ ವ್ಯಕ್ತವಾಯಿತು. ವಿಷಯ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೆರೆಯಲ್ಲಿ ಹುಡುಕಾಟ ನಡೆಸಿದರು.
ಶುಕ್ರವಾರ ಬೆಳಿಗ್ಗೆ ಹುಡುಕಾಟದ ವೇಳೆ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತ್ಮಹತ್ಯೆ ಎಂಬ ಕೋನದಲ್ಲಿ ತನಿಖೆ ಆರಂಭಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ.ಇದನ್ನು ಓದಿ –ಇಸ್ರೇಲ್ ದಾಳಿ: ಇರಾನ್ ಪ್ಯಾರಾಮಿಲಿಟರಿ ಮುಖ್ಯಸ್ಥ ಸೇರಿದಂತೆ 3 ಜನ ಸಾವು
ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗುತ್ತಿದೆ.