ಮೈಸೂರು: ನಗರದ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ಜೂ.೨೯ರವರೆಗೆ ಆಯೋಜಿಸಿರುವ ಗುಜರಾತ್ ಕರಕುಶಲ ಉತ್ಸವಕ್ಕೆ ಅದ್ಧೂರಿಯಾಗಿ ಶುಕ್ರವಾರ ಚಾಲನೆ ದೊರೆಯಿತು.
ಗುಜರಾತ್ ಇಂಡೆಕ್ಸ್-ಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಜೋಶಿ ಕರಕುಶಲ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗುಜರಾತ್ನ ಕರಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳು ಒಂದೇ ಸೂರಿನಡಿ, ಯಾವುದೇ ಮಧ್ಯವರ್ತಿಗಳಿಲ್ಲದೆ ಗ್ರಾಹಕರಿಗೆ ಸಿಗಬೇಕೆಂಬ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ೭೦ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಿದ್ದು, ತಮ್ಮ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ. ಸಾರ್ವಜನಿಕರು ಭೇಟಿ ನೀಡಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಉತ್ಸವದಲ್ಲಿ ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವ ಕುಶಲಕರ್ಮಿಗಳು ಭಾಗವಹಿಸಿದ್ದು, ಒಂದೇ ಸೂರಿನಡಿಯಲ್ಲಿ ಕರಕುಶಲ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡುತಿದ್ದಾರೆ. ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ದ ಹಾಗೂ ಕ್ರೀಯಾಶೀಲರಾಗಿರುವ ಸುಮಾರು ೭೦ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ. ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್ಗಳು, ಟವಲ್ಗಳು, ಕುಶನ್ ಕವರ್ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳು ಉತ್ಸವದಲ್ಲಿವೆ.ಇದನ್ನು ಓದಿ – ಹನುಮಾನ್ ಚಾಲೀಸ್ ಕೇಂದ್ರ ಸ್ಥಾಪನೆಯ ಗುರಿ: ಪ್ರವೀಣ ಭಾಯೀ ತೊಗಡಿಯಾ
ಮೇಳದ ವಿಶೇಷ ಎಂದರೆ ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗಲಿವೆ. ಈ ಕಾರಣದಿಂದಾಗಿ ಮೈಸೂರು ಹಾಗು ಸುತ್ತಮುತ್ತಲಿನ ಗ್ರಾಹಕರಿಗೆ ಗುಜರಾತ್ ಸಂಸ್ಕೃತಿಯ ಉಡುಗೆ-ತೊಡುಗೆಗಳು ಮತ್ತು ಆಲಂಕಾರಿಕ ವಸ್ತುಗಳು ನೇರವಾಗಿ, ಉತ್ತಮ ಗುಣಮಟ್ಟದಲ್ಲಿ, ಕಡಿಮೆ ಬೆಲೆಗೆ ದೊರೆಯುತ್ತಿವೆ.
ಕಾರ್ಯಕ್ರಮದಲ್ಲಿ ಕರಕುಶಲ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ವಿನೋದ್ ಕುಮಾರ್, ಗುಜರಾತ್ನ ಇಂಡೆಕ್ಸ್ಟ್-ಸಿ ವ್ಯವಸ್ಥಾಪಕ ಡಾ.ಸ್ನೇಹಲ್ ಮಕ್ವಾನಾ, ಸಂಯೋಜನಾಧಿಕಾರಿ ಶಿವನಂಜಸ್ವಾಮಿ, ಕಾರ್ಯಕ್ರಮ ಸಂಯೋಜನಾಧಿಕಾರಿ ರಾಕೇಶ್ ರೈ, ಸುಂದರಪ್ಪ ಇದ್ದರು.