ಮಂಡ್ಯ:ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ 59 ವರ್ಷದ ಶಿವಣ್ಣ ಎಂಬ ಆರೋಪಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿ ಮಂಡ್ಯ 2ನೇ ಜಿಲ್ಲಾ ಸೆಷನ್ ನ್ಯಾಯಾಲಯ ತೀರ್ಪು ನೀಡಿದೆ.
ಘಟನೆ ವಿವರ:
2023ರ ಡಿಸೆಂಬರ್ 11 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಳಗೊಳ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿತ್ತು. ತಮ್ಮ ಮನೆಯ ಮುಂದಿದ್ದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಶಿವಣ್ಣ ಪುಸಲಾಯಿಸಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಯಾರಿಗೂ ಹೇಳಬಾರದು ಎಂದು ಮಗುವಿಗೆ ಬೆದರಿಕೆ ಕೂಡ ಹಾಕಿದ್ದ.
Contents
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೃಷ್ಣರಾಜ ಸಾಗರ ಪೊಲೀಸ್ ಠಾಣೆಯಲ್ಲಿ ಪಾಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು.
ತನಿಖೆ ಮತ್ತು ನ್ಯಾಯಾಲಯದ ಪ್ರಕ್ರಿಯೆ:
- ಅಂದಿನ ಪಿಎಸ್ಐ ಬಸವರಾಜು ದೂರು ದಾಖಲಿಸಿದ್ದರು.
- ಅದಕ್ಕೂ ಮುಂಚೆ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ. ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
- ತನಿಖಾ ತಂಡದಲ್ಲಿ ಪಿಎಸ್ಐ ರಮೇಶ್ ಕರಕೀಕಟ್ಟಿ, ಎಎಸ್ಐ ಸತೀಶ್, ಹಾಗೂ ಸಿಬ್ಬಂದಿಗಳಾದ ಯಧುರಾಜ್, ರೇಣುಕುಮಾರ್, ಅಶ್ವಿನಿ, ಪುಟ್ಟಲಕ್ಷ್ಮಿ ಅವರು ಪ್ರಮುಖ ಪಾತ್ರವಹಿಸಿದ್ದರು.
ಇದನ್ನು ಓದಿ –ಅಹಮದಾಬಾದ್ ವಿಮಾನ ದುರಂತ: 2 ಎಂಜಿನ್ಗಳಿಗೆ ಇಂಧನ ಕಡಿತವೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ
ತೀರ್ಪು:
- 2025ರ ಜುನ್ 11ರಂದು, ನ್ಯಾಯಾಧೀಶರಾದ ದಿಲೀಪ್ ಕುಮಾರ್ ಪ್ರಕರಣದ ವಿಚಾರಣೆ ನಡೆಸಿ,
- ಜೀವಾವಧಿ ಶಿಕ್ಷೆ
- ಮತ್ತು ₹1,00,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
- ಸಂತ್ರಸ್ತರ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದರು.
- ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಪ್ರಕರಣದ ತನಿಖೆ ಮತ್ತು ವಿಚಾರಣೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ಕೃಷ್ಣರಾಜ ಸಾಗರ ಠಾಣಾ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.