By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Articles > ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
Articles

ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ

Team Varthaman
Last updated: January 30, 2026 7:42 PM
Team Varthaman
Published: February 1, 2026
Share
SHARE

ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ, ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆಯಾದರೂ ಆರೋಗ್ಯ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್ ಎದೆಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.

Join WhatsApp Group

ನೆಲದ ಮೇಲೆ ಚೆಲ್ಲಿದರೆ ತಕ್ಷಣ ಕಣ್ಣಿಗೆ ಕಾಣದಷ್ಟು ಚಿಕ್ಕ ಗಾತ್ರದ ಆದರೆ ದೈತ್ಯಾಕಾರದ್ದಷ್ಟು ಅಪಾರವಾದ ಔಷಧೀಯ ಗುಣಗಳನ್ನು ಹೊಂದಿರುವ ಈ ಮಸಾಲೆ ಕಾಳುಗಳಿಗೆ ಕನ್ನಡ ಭಾಷೆಯಲ್ಲಿ ಓಮು ಕಾಳು, ಅಜಮೋದ, ಅಜಮೂಲ, ಅಜವಾನ ಎಂದು ಕರೆಯುತ್ತಾರೆ. ಇನ್ನು, ಸಂಸ್ಕೃತ ಭಾಷೆಯಲ್ಲಿ ಯವನಿ ಅಥವಾ ಉಗ್ರಗಂಧ ಎಂದು ಕರೆಯುಲ್ಪಡುವ ಅಜಮೋದಿಕಾ ಎಂದೂ ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಅಜವಾಯಿನ್ ಎನ್ನುತ್ತಾರೆ. ಆಂಗ್ಲ ಭಾಷೆಯಲ್ಲಿ Ajowan, Ajwain ಎನ್ನುತ್ತಾರೆ. ವಿಶಿಷ್ಟವಾದ ಪರಿಮಳ, ಅಲ್ಪ ಖಾರದ ರುಚಿ ಇರುವ ಈ ಓಮು ಕಾಳು ಎಲ್ಲರಿಗೂ ಪರಿಚಿತ.

ಪ್ರಾಚೀನ ಕಾಲದಿಂದಲೂ ಮನೆ ಮದ್ದಾಗಿ ಬಳಕೆಯಲ್ಲಿರುವ ಅಜವಾನ ಅನುಪಮ ಔಷಧೀಯ ಗುಣಗಳನ್ನು ಹೊಂದಿದೆ. ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣವೇ…

  • ಜೀರ್ಣಕ್ರಿಯೆಗೆ ಅಜ್ವೈನ ಬಹಳ ಒಳ್ಳೆಯದು. ಅಧ್ಯಯನದ ಪ್ರಕಾರ, ಅಜ್ವೈನ್ ಗ್ಯಾಸ್ಟ್ರಿಕ್ (Gastric) ಆಮ್ಲ ಮತ್ತು ಜೀರ್ಣಕಾರಿ ಕಿಣ್ವಗಳನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುವ ಕೆಲಸ ಮಾಡುತ್ತದೆ. ಹೊಟ್ಟೆಯಲ್ಲಿರುವ ಸೋಂಕು (Infection ) ನಿವಾರಣೆಗೆ ಓಂಕಾಳು ರಾಮಬಾಣವಾಗಿ ಕೆಲಸಮಾಡುತ್ತದೆ.
  • ಅಜ್ವೈನ ನೀರು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲನ್ನು ದೇಹದಿಂದ ಹೊರಗೆ ಹಾಕುತ್ತದೆ.ಅಧ್ಯಯನದಲ್ಲಿ ಓಂಕಾಳಿನ ಬೀಜಗಳು ಕೆಟ್ಟ ಕೊಲೆಸ್ಟ್ರಾಲ್ ಟ್ರೈಗ್ಲಿಸರೈಡ್ ಮತ್ತು ಎಲ್ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಪತ್ತೆಯಾಗಿದೆ. ಓಂಕಾಳು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗೆ ಮಾತ್ರವಲ್ಲ ಹೃದಯಕ್ಕೆ ಪ್ರಯೋಜನಕಾರಿಯಾದ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗಲು ನೆರವಾಗುತ್ತದೆ.
  • ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ರಕ್ತದೊತ್ತಡ ಕೂಡ ಒಂದು. ರಕ್ತದೊತ್ತಡದಿಂದ ಹೃದಯಾಘಾತವಾಗುವ ಸಾಧ್ಯತೆಯಿರುತ್ತದೆ. ಓಂಕಾಳಿನ ಸೇವನೆಯಿಂದ ಸಾಕಷ್ಟು ಪ್ರಯೋಜನವಿದೆ. ಓಂಕಾಳು ಸೇವನೆಯಿಂದ ಕ್ಯಾಲ್ಸಿಯಂ ಹೃದಯಕ್ಕೆ ಹೋಗುವುದನ್ನು ತಡೆಯುತ್ತದೆ. ರಕ್ತನಾಳಗಳನ್ನು ವಿಸ್ತರಿಸುವ ಕೆಲಸ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
  • ಓಂ ಕಾಳು ಶ್ವಾಸಕೋಶಗಳನ್ನು ಉತ್ತಮವಾಗಿಡುತ್ತದೆ. ಕೆಮ್ಮು ಮತ್ತು ಕಫವನ್ನು ತಡೆಗಟ್ಟುವಲ್ಲಿ ಇದು ಪರಿಣಾಮಕಾರಿ. ಅಜ್ವೈನ ಸೇವನೆ ಮಾಡುವುದ್ರಿಂದ ಅಸ್ತಮ ಸಮಸ್ಯೆ ಕಡಿಮೆಯಾಗುತ್ತದೆ.
  • ಹೊಟ್ಟೆಯಲ್ಲಿ ಯಾವುದೇ ಸಮಸ್ಯೆಯಾದ್ರೂ ಅದಕ್ಕೆ ಓಂಕಾಳು ಬಹಳ ಒಳ್ಳೆಯದು. ಫುಡ್ ಪಾಯಿಸನ್, ವಾಂತಿ, ವಾಕರಿಕೆ ಸಮಸ್ಯೆ ಕಾಡುತ್ತಿದ್ದಾಗ ಓಂಕಾಳಿನ ನೀರು ಬಹಳ ಒಳ್ಳೆಯದು.
  • ನವಜಾತ ಶಿಶು ಹೆಚ್ಚು ಅಳುತ್ತಿದ್ದರೆ ಮನೆಯ ಹಿರಿಯರು ಅಜವಾನ ತಿಂದು ಮಗುವಿನ ಮುಖಕ್ಕೆ ಊದಲು ಹೇಳುತ್ತಾರೆ. ಏಕೆಂದರೆ ತಾಯಿಯಾದವಳು ಅಜವಾನ ತಿಂದು ಮಗುವಿನ ಮುಖಕ್ಕೆ ಊದುವ ಮಾತ್ರದಿಂದ ಇದರ ವಿಶಿಷ್ಟ ಪರಿಮಳ ಮಗುವಿನ ಶ್ವಾಸದೊಂದಿಗೆ ಹೊಟ್ಟೆಗೆ ಸೇರಿ, ಮಗುವಿನ ಹೊಟ್ಟೆ ಯುಬ್ಬರ ಕಡಿಮೆಯಾಗಿ ಮಗುವಿಗೆ ಆರಾಮ ವೆನಿಸುತ್ತದೆ.
  • ಚಿಕ್ಕ ಮಕ್ಕಳು ಹಾಸಿಗೆಯಲ್ಲಿ ಮೂತ್ರ ಮಾಡುತ್ತಿದ್ದರೆ ಅಜವಾನ ಹಾಗೂ ಕರಿ ಎಳ್ಳು ಬೆಲ್ಲ ಸೇರಿಸಿ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿ ( ದಿನದಲ್ಲಿ ಎರಡು) ತಿನ್ನಿಸುವುದರಿಂದ ಗುಣಕಾಣಬಹುದು.
  • ಕಫ ಕೆಮ್ಮುಗಳಿಗೆ ಎದೆಯ ಮೇಲೆ ಸಾಸಿವೆ ಎಣ್ಣೆ ಯನ್ನು ಸವರಿ, ಒಂದು ಬಟ್ಟೆಯಲ್ಲಿ ಓಮು ಕಾಳು ಸ್ವಲ್ಪ ಪಚ್ಚ ಕರ್ಪುರ ಹಾಕಿ ಚೂರು ಬಿಸಿ ಮಾಡಿ ಎದೆಯ ಮೇಲೆ ಸವರಿ ವಾಸನೆ ತೆಗೆದುಕೊಳ್ಳುವುದರಿಂದ ಮೇಲೆನಿಸುವುದು.
  • ಪ್ರಸವದ ನಂತರ ಬಾಣಂತಿಯರಿಗೆ ಅಜವಾನ ತಿನ್ನಲು ಕೊಡುತ್ತಾರೆ. ಅಥವಾ ಕಷಾಯ ಮಾಡಿಕೊಡುವುದರಿಂದ ಹಸಿವು ಹೆಚ್ಚಾಗಿ,ಉಂಡ ಆಹಾರ ಜೀರ್ಣವಾಗುತ್ತದೆ.ಇದು ಕ್ರಿಮಿನಾಶಕ ಗುಣ ಹೊಂದಿದ್ದು ಗರ್ಭಾಶಯ ಕೂಡ ಸ್ವಚ್ಛವಾಗುತ್ತದೆಯೆಂದು ಹೇಳುತ್ತಾರೆ.
  • ಓಮು ಕಾಳು ಕಿಡ್ನಿಯಲ್ಲಿ ಕಲ್ಲು ಸೇರಿಕೊಳ್ಳುವುದನ್ನು ತಡೆಯುವಲ್ಲಿ ಪರಿಣಾಮಕಾರಿ. ಇದರ ಸೇವನೆಯಿಂದ ಲಿವರ್ ಮತ್ತು ಕಿಡ್ನಿ ಸುಲಭವಾಗಿ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.
  • ಗರ್ಭಾವಸ್ಥೆ ಸಮಯದಲ್ಲಿ ಓಮು ಕಾಳಿನ ಸೇವನೆ ರಕ್ತಶುದ್ಧೀಕರಣಗೊಳಿಸಿ,ದೇಹದಲ್ಲಿ ರಕ್ತ ಸಂಚಲನ ಹೆಚ್ಚಿಸುತ್ತದೆ.
  • ಥಂಡಿ ಅಥವಾ ಚಳಿ ವಾತಾವರಣವಿದ್ದಾಗ, ಈ ಕಾಳನ್ನು ತಿಂದರೆ ಕೆಮ್ಮು ಮತ್ತು ನೆಗಡಿ ಉಪಶಮನವಾಗುತ್ತದೆ. ಓಮನ್ನು ಅಗಿದು ಬಿಸಿ ನೀರಿನೊಂದಿಗೆ ನುಂಗಬೇಕು. ಇದು ಅಸ್ತಮಾ ಖಾಯಿಲೆಗೂ ಸೂಕ್ತ. ಬೆಲ್ಲದೊಂದಿಗೆ ಓಮು ಕಾಳನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಸೇವಿಸಬೇಕು.
  • ಸ್ವಲ್ಪ ಪ್ರಮಾಣದ ಓಂ ಕಾಳುಗಳನ್ನು ನೇರವಾಗಿ ಅಥವಾ ಊಟದ ನಂತರ ಮೌತ್ ಫ್ರೆಶ್ನರ್ ಮಿಶ್ರಣದಲ್ಲಿ ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತು ಉಸಿರಾಟಕ್ಕೆ ಸಹಾಯ ಮಾಡುತ್ತದೆ.

ಅಜ್ವೈನ್ ನೀರಿನ ಆರೋಗ್ಯ ಪ್ರಯೋಜನಗಳು.

  • ಖಾಲಿ ಹೊಟ್ಟೆಯಲ್ಲಿ ಅಜವೈನ್ ನೀರನ್ನು ಸೇವಿಸುವುದರಿಂದ ದೇಹದಲ್ಲಿ ಕೊಬ್ಬು ಕಡಿಮೆಯಾಗುತ್ತದೆ. ತೂಕವನ್ನು ನಿಯಂತ್ರಣದಲ್ಲಿ ಇಡಲು ಅಜ್ವೈನ ನೀರು ಬಹಳ ಉಪಯೋಗಕಾರಿ. ಇದು ಸರಳವಾದರೂ ಶಕ್ತಿಶಾಲಿ ಪಾನೀಯವಾದ ಅಜ್ವೈನ್ ನೀರು ಆರೋಗ್ಯವನ್ನು ಗಮನಾರ್ಹವಾಗಿ ಸುಧಾರಿಸುವ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಅಡ್ಡಪರಿಣಾಮಗಳು ಮತ್ತು ಮುನ್ನೆಚ್ಚರಿಕೆಗಳು

ಅಜ್ವೈನ್ ನೀರಿನ ಪ್ರಯೋಜನಗಳು ಹಲವಾರು ಇದ್ದರೂ , ಅದರ ಸಂಭಾವ್ಯ ಅಡ್ಡಪರಿಣಾಮಗಳ ಬಗ್ಗೆ ತಿಳಿದಿರುವುದು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಮುಖ್ಯ.

  • ಕೆಲವು ಜನರಲ್ಲಿ, ಅಜ್ವೈನ್ ನೀರಿನ ಅತಿಯಾದ ಸೇವನೆಯು ಹೊಟ್ಟೆ ಅಸಮಾಧಾನ, ಆಮ್ಲೀಯ ಹಿಮ್ಮುಖ ಹರಿವು ಅಥವಾ ಎದೆಯುರಿಗೆ ಕಾರಣವಾಗಬಹುದು. ನಿಮ್ಮ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ನೋಡಲು ಸಣ್ಣ ಪ್ರಮಾಣದಲ್ಲಿ ಪ್ರಾರಂಭಿಸುವುದು ಸೂಕ್ತ.

*ಅಪರೂಪವಾಗಿದ್ದರೂ, ಕೆಲವು ವ್ಯಕ್ತಿಗಳು ದದ್ದುಗಳು, ತುರಿಕೆ ಅಥವಾ ಊತದಂತಹ ಅಲರ್ಜಿಯ ಪ್ರತಿಕ್ರಿಯೆಗಳನ್ನು ಅನುಭವಿಸಬಹುದು. ಈ ಯಾವುದೇ ಲಕ್ಷಣಗಳು ಕಂಡುಬಂದರೆ, ಬಳಕೆಯನ್ನು ನಿಲ್ಲಿಸಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

*ಗರ್ಭಿಣಿಯರು ತಮ್ಮ ಆಹಾರದಲ್ಲಿ ಅಜ್ವೈನ್ ನೀರನ್ನು ಸೇರಿಸುವ ಮೊದಲು ತಮ್ಮ ವೈದ್ಯರನ್ನು ಸಂಪರ್ಕಿಸಬೇಕು, ಏಕೆಂದರೆ ಇದು ಹಾರ್ಮೋನುಗಳ ಮಟ್ಟ ಮತ್ತು ಗರ್ಭಾಶಯದ ಸಂಕೋಚನದ ಮೇಲೆ ಪ್ರಭಾವ ಬೀರಬಹುದು.

  • ನೀವು ಯಾವುದೇ ನಿರ್ದಿಷ್ಟ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ವಿಶೇಷವಾಗಿ ರಕ್ತ ತೆಳುವಾಗುವುದು ಅಥವಾ ರಕ್ತದೊತ್ತಡಕ್ಕಾಗಿ, ಅಜ್ವೈನ್ ನೀರನ್ನು ಸೇವಿಸುವ ಮೊದಲು ನಿಮ್ಮ ವೈದ್ಯರೊಂದಿಗೆ ಚರ್ಚಿಸಿ, ಏಕೆಂದರೆ ಅದು ಈ ಔಷಧಿಗಳೊಂದಿಗೆ ಸಂವಹನ ನಡೆಸಬಹುದು.

ನಮ್ಮ ಆಹಾರದಲ್ಲಿ ಓಂ ಕಾಳುಗಳನ್ನು ಸೇರಿಸುವುದು ಒಟ್ಟಾರೆ ಯೋಗಕ್ಷೇಮವನ್ನು ಬೆಂಬಲಿಸಲು ಸುವಾಸನೆಯ ಮತ್ತು ನೈಸರ್ಗಿಕ ಮಾರ್ಗವಾಗಿದೆ. ಓಂ ಕಾಳುಗಳನ್ನು ಸಾಮಾನ್ಯವಾಗಿ ಬಳಕೆಗೆ ಸುರಕ್ಷಿತವಾಗಿದ್ದರೂ, ಆರೋಗ್ಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತವಾದುದು.

ಸೌಮ್ಯ ಸನತ್

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ
ಆಚಾರ್ಯಶಂಕರರೆಂಬ ಭಾಷ್ಯಕೇಸರಿ
ರಾಮಾನುಜಾಚಾರ್ಯರು
ಆತ್ಮಹತ್ಯೆ …. ಆಯ್ಕೆಯೇ ಅಲ್ಲ.
ಮುಟ್ಟಿನ ಮೂಢನಂಬಿಕೆಗೆ ಪೂರ್ಣವಿರಾಮ
TAGGED:Ajwainindigestionಅಜವಾನಅಜೀರ್ಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್‌ಗೆ ಸಿಬಿಐ ಸಮನ್ಸ್

Team Varthaman
Team Varthaman
January 6, 2026
ಆಸ್ತಿ ವಿವಾದದಲ್ಲಿ ಅಣ್ಣನಿಂದ ತಮ್ಮನ ಹತ್ಯೆ: ಗುಂಡು ಹಾರಿಸಿ ಕೊಲೆ
ಶ್ರಾವಣ ಮಾಸ ಬಂದಾಗ
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ
ಏಕದಿನ ಕ್ರಿಕೆಟ್‌ಗೆ ಗ್ಲೇನ್ ಮ್ಯಾಕ್ಸ್‌ವೆಲ್ ವಿದಾಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?