By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: 105 ಅಡಿಗೆ ಏರಿದ KRS ನೀರಿನ ಮಟ್ಟ, ನೀರು ಬಿಡಲು ರೈತರ ಒತ್ತಾಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > 105 ಅಡಿಗೆ ಏರಿದ KRS ನೀರಿನ ಮಟ್ಟ, ನೀರು ಬಿಡಲು ರೈತರ ಒತ್ತಾಯ
KarnatakaMandyaTrending

105 ಅಡಿಗೆ ಏರಿದ KRS ನೀರಿನ ಮಟ್ಟ, ನೀರು ಬಿಡಲು ರೈತರ ಒತ್ತಾಯ

Team Varthaman
Last updated: August 5, 2026 9:30 AM
Team Varthaman
Published: August 5, 2026
Share
SHARE

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಕೆಆರ್‌ಎಸ್ (ಕೃಷ್ಣರಾಜ ಸಾಗರ) ಜಲಾಶಯದ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗಾಗಿ ಕೂಡಲೇ ನಾಲೆಗಳಿಗೆ ನೀರು ಹರಿಸುವಂತೆ ರೈತರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಇಳಿದಿದ್ದಾಗ, ಕುಡಿಯುವ ನೀರಿನ ಕೊರತೆಯನ್ನು ಮನಗಂಡ ಸರ್ಕಾರ ಹೊಸ ಬೆಳೆ ಬಿತ್ತನೆ ಮಾಡದಂತೆ ರೈತರಿಗೆ ಸೂಚನೆ ನೀಡಿತ್ತು. ಆದರೆ ಈಗ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದೆ.

Contents
  • ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಕೆಆರ್‌ಎಸ್ (ಕೃಷ್ಣರಾಜ ಸಾಗರ) ಜಲಾಶಯದ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗಾಗಿ ಕೂಡಲೇ ನಾಲೆಗಳಿಗೆ ನೀರು ಹರಿಸುವಂತೆ ರೈತರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
  • ತುಂಗಭದ್ರಾ ಜಲಾಶಯಕ್ಕೂ ಹೆಚ್ಚಿದ ಒಳಹರಿವು
Join WhatsApp Group

ನೀರಿನ ಮಟ್ಟ 105 ಅಡಿಗೆ ತಲುಪಿರುವುದರಿಂದ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಆರಂಭಿಸಲು ಸಜ್ಜಾಗಿದ್ದಾರೆ. ಬಿತ್ತನೆಗೆ ಈಗ ಸೂಕ್ತ ಸಮಯವಾಗಿರುವುದರಿಂದ ಸರ್ಕಾರ ತಕ್ಷಣ ನಾಲೆಗಳಿಗೆ ನೀರು ಹರಿಸುವ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ತಡವಾದರೆ ಮುಂಗಾರು ಬೆಳೆ ಹಾನಿಯಾಗುವ ಆತಂಕವೂ ವ್ಯಕ್ತವಾಗಿದೆ.

ತುಂಗಭದ್ರಾ ಜಲಾಶಯಕ್ಕೂ ಹೆಚ್ಚಿದ ಒಳಹರಿವು

ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ತುಂಗಭದ್ರಾ ಜಲಾಶಯಕ್ಕೂ ಭಾರಿ ಪ್ರಮಾಣದ ಒಳಹರಿವು ದಾಖಲಾಗುತ್ತಿದೆ. ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳ ಜೀವನಾಡಿಯಾಗಿರುವ ಈ ಜಲಾಶಯದಲ್ಲಿ ಕಳೆದ ಕೆಲವು ವಾರಗಳವರೆಗೆ ನೀರಿನ ಕೊರತೆ ಉಂಟಾಗಿತ್ತು. ಆದರೆ ಕಳೆದ ಒಂದು ವಾರದಿಂದ ಪರಿಸ್ಥಿತಿ ಬದಲಾಗಿದ್ದು, ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿದೆ.

105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 51.145 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 91 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೇವಲ ಒಂದೇ ದಿನದಲ್ಲಿ ಸುಮಾರು 7 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಿಂದ ನೀರಿನ ಸಂಗ್ರಹ 44 ಟಿಎಂಸಿಯಿಂದ 51 ಟಿಎಂಸಿಗೆ ಏರಿಕೆಯಾಗಿದೆ.ಇದನ್ನು ಓದಿ –7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿ ಮಳೆ ಸಾಧ್ಯತೆ

ಈ ಬೆಳವಣಿಗೆಯಿಂದ ನೀರಿನ ಕೊರತೆಯ ಆತಂಕದಲ್ಲಿದ್ದ ರೈತರಿಗೆ ಹೊಸ ಭರವಸೆ ಮೂಡಿದ್ದು, ಮುಂಬರುವ ದಿನಗಳಲ್ಲಿ ಮಳೆ ಇದೇ ರೀತಿ ಮುಂದುವರಿದರೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆ ವ್ಯಕ್ತವಾಗಿದೆ.

  • 105 ಅಡಿಗೆ ಏರಿದ KRS ನೀರಿನ ಮಟ್ಟ, ನೀರು ಬಿಡಲು ರೈತರ ಒತ್ತಾಯ
  • 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿ ಮಳೆ ಸಾಧ್ಯತೆ
  • ‘ಋತುತಾರೆ’ ಯೋಜನೆಗೆ ರಮ್ಯಾ ರಾಯಭಾರಿ
  • ತ್ರಿಶಾ ವಿವಾದ: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
  • ಸಚಿವರಾಗಿ 19 ಶಾಸಕರ ಪ್ರಮಾಣವಚನ ಸ್ವೀಕಾರ
ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ; ಇಬ್ಬರು ಮಕ್ಕಳ ದುರ್ಮರಣ
ಭಾರತ-ಚೀನಾ ಸಂಬಂಧಗಳಲ್ಲಿ ಸ್ಥಿರ ಪ್ರಗತಿ
ಅಭಿಷೇಕ್ ಶರ್ಮಾ ಜೊತೆ ಜಗಳ: ದಿಗ್ವೇಶ್ ರಥಿಗೆ ಒಂದು ಪಂದ್ಯ ನಿಷೇಧ ಮತ್ತು  ದಂಡ
ಅನ್ನ-ನೀರಿಗೆ ಹಾಹಾಕಾರ, ಅಪಮೃತ್ಯು ಹೆಚ್ಚಳ: ಕೋಡಿಮಠ ಶ್ರೀಗಳ ಭವಿಷ್ಯವಾಣಿ
ತುಂಗಭದ್ರಾ ಡ್ಯಾಂ ಬಳಿ ಗುಡ್ಡದಲ್ಲಿ ಭಾರೀ ಅಗ್ನಿಕಾಂಡ
TAGGED:breakingnewsKRS DamlatestnewsMandya news
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Blog

Asia Cup 2025 :ನಾಳೆಯಿಂದ ಏಷ್ಯಾ ಕಪ್‌ 2025 ಪ್ರಾರಂಭ

Team Varthaman
Team Varthaman
September 8, 2025
ಮಂಡ್ಯ: ಭೀಕರ ಅಪಘಾತ – ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರ ದುರ್ಮರಣ
ಸಚಿವ ಸಂಪುಟ ವಿಸ್ತರಣೆ: ಸುಳಿವು ಕೊಟ್ಟ ಸಿಎಂ
ಬೈಕ್–ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಮಹಿಳೆ ಮೃತ್ಯು
ಅರೋಗ್ಯ ಭಾಗ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?