- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ
ಕಲಬುರಗಿ: ಬೆಂಬಲ ಬೆಲೆಯಡಿ (MSP) ತೊಗರಿ ಖರೀದಿ ಕೇಂದ್ರಗಳನ್ನು ರಾಜ್ಯದಲ್ಲಿ ತಕ್ಷಣ ಆರಂಭಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 2025–26ನೇ ಸಾಲಿನಲ್ಲಿ ರಾಜ್ಯದ 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆದಿದ್ದು, ಒಟ್ಟು 12.60 ಲಕ್ಷ ಮೆಟ್ರಿಕ್ ಟನ್ ಇಳುವರಿ ನಿರೀಕ್ಷಿಸಲಾಗಿದೆ.
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳು ತೊಗರಿ ಬೆಳೆ ಪ್ರಮುಖ ಕೇಂದ್ರಗಳಾಗಿವೆ.
ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು, “ರಾಜ್ಯದಲ್ಲಿ ಬೆಳೆದ ತೊಗರಿ ಡಿಸೆಂಬರ್ನಲ್ಲೇ ಮಾರುಕಟ್ಟೆ ಪ್ರವೇಶಿಸುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿಕ್ವಿಂಟಲ್ ತೊಗರಿ ₹5,830 ರಿಂದ ₹6,700 ದರಕ್ಕೇ ಮಾರಾಟವಾಗುತ್ತಿದೆ. ಆದರೆ 2025–26ಕ್ಕೆ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಪ್ರತಿಕ್ವಿಂಟಲ್ ₹8,000. ಹೀಗಾಗಿ ರೈತರು ಬೆಂಬಲ ಬೆಲೆಗೆ ಮಾರಾಟ ಮಾಡಲು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದ್ದಾರೆ.
ಆದರೆ, ಕೇಂದ್ರ ಸರ್ಕಾರ ಸಾಮಾನ್ಯವಾಗಿ ತೊಗರಿ ಖರೀದಿ ಕೇಂದ್ರಗಳನ್ನು ಫೆಬ್ರುವರಿ ಅಥವಾ ಮಾರ್ಚ್ನಲ್ಲಿ ಮಾತ್ರ ತೆరೆಯುತ್ತದೆ. ಸಿಎಂ ಅವರ ಪ್ರಕಾರ, ಈ ವಿಳಂಬದಿಂದ ರೈತರಿಗೆ ನಷ್ಟವಾಗುವ ಅಪಾಯ ಉಂಟಾಗಿದೆ.
“ನಾಫೆಡ್ ಮತ್ತು ಎನ್ಸಿಸಿಎಫ್ ಮೂಲಕ ತೊಗರಿ ಖರೀದಿ ಕೇಂದ್ರಗಳ ಆರಂಭಕ್ಕೆ ಅವಕಾಶ ನೀಡುವಂತೆ ನವೆಂಬರ್ 6ರಂದು ಪತ್ರ ಬರೆದು ಮನವಿ ಮಾಡಿದ್ದೇವೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರಾಜ್ಯದಲ್ಲಿ ತಕ್ಷಣವೇ ಎಂಎಸ್ಪಿಯಡಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಬೇಕು,” ಎಂದು ಡಿಸೆಂಬರ್ 8ರಂದು ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.








