ಗಾಂಧೀನಗರ, ಜೂನ್ 14 – ಅಹಮದಾಬಾದ್ನಿಂದ ಲಂಡನ್ಗ್ಯಾಟ್ವಿಕ್ ವಿಮಾನ ನಿಲ್ದಾಣದತ್ತ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್ಲೈನರ್ ವಿಮಾನ ದುರಂತದ ಪೈಲವು ಗಂಭೀರ ತಿರುವು ಪಡೆದಿದ್ದು, ಮೃತರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.
ದುರಂತದ ವಿವರ:
ಗುರುವಾರ ಬೆಳಿಗ್ಗೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನವು ತಾಂತ್ರಿಕ ದೋಷದಿಂದಾಗಿ ಭಾರೀ ಸ್ಫೋಟದೊಂದಿಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ 230 ಪ್ರಯಾಣಿಕರು, 2 ಪೈಲಟ್ಗಳು ಮತ್ತು 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣದಲ್ಲಿದ್ದರು. ಈ ದುರಂತದಲ್ಲಿ ವಿಮಾನದಲ್ಲಿದ್ದವರು ಮಾತ್ರವಲ್ಲದೆ, ಪತನದ ಸ್ಥಳದಲ್ಲಿದ್ದ ಜನರೂ ಸಾವನ್ನಪ್ಪಿದ್ದಾರೆ. ಪೈಕಿ ಒಬ್ಬ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಬದುಕುಳಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತನಿಖೆ ಮತ್ತು ಬ್ಲ್ಯಾಕ್ಬಾಕ್ಸ್ ಮಾಹಿತಿ:
ವಿಮಾನ ದುರಂತಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಸದ್ಯಕ್ಕೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ಬಾಕ್ಸ್ಗಳಲ್ಲಿ ಒಂದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ಪರಿಶೀಲನೆಗಾಗಿ ಕೊಂಡೊಯ್ದಿದ್ದಾರೆ. ಇನ್ನೊಂದು ಬ್ಲ್ಯಾಕ್ಬಾಕ್ಸ್ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಪ್ರಧಾನಿ ಮೋದಿ ಭೇಟಿಯಾಗಿದೆ:
ದುರಂತದ ಘಟನೆ ಬೆಳಕಿಗೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆಗೆ ಸೇರಿರುವ ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಪೀಡಿತ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಸಂಪೂರ್ಣ ತನಿಖೆ ಮತ್ತು ನೆರವಿನ ಭರವಸೆ ನೀಡಿದ್ದಾರೆ.ಇದನ್ನು ಓದಿ –ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ ಪ್ರಕಟ
ಇದೊಂದು ಭೀಕರ ದುರಂತವಾಗಿದ್ದು, ಶೋಕದ ಛಾಯೆ ಮನೆಮಾಡಿದೆ. ಘಟನೆಯ ಕುರಿತು ಮುಂದಿನ ದಿನಗಳಲ್ಲಿ ಇನ್ನಷ್ಟು ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.