ಸಾವಿನ ಸಂಖ್ಯೆ ಹೆಚ್ಚಾಗುವ ಶಂಕೆ
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಏರ್ ಇಂಡಿಯಾ ವಿಮಾನವೊಂದು ಪತನಗೊಂಡಿರುವ ದುರ್ಘಟನೆ ಅಹಮದಾಬಾದ್ನಲ್ಲಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ 110 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ವಿಮಾನದಲ್ಲಿ ಒಟ್ಟು 232 ಪ್ರಯಾಣಿಕರು ಇದ್ದರು — ಇವರಲ್ಲಿ 230 ಜನ ವಯಸ್ಕರು ಹಾಗೂ 2 ಮಕ್ಕಳು ಸೇರಿದ್ದರು. ಈ ಪೈಕಿ 169 ಮಂದಿ ಭಾರತೀಯರು ಎಂದು ತಿಳಿದುಬಂದಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನವು ಮೇಘಾನಿ ನಿವಾಸಿ ಪ್ರದೇಶದಲ್ಲಿ ನೆಲಕ್ಕಪ್ಪಳಿಸಿದೆ. ಸುಮಾರು 300ರಿಂದ 600 ಅಡಿ ಎತ್ತರದಿಂದ ವಿಮಾನ ಬಿದ್ದಿದ್ದು, ಪರಿಸರದಲ್ಲಿ ಭಾರೀ ನಾಶ ಉಂಟಾಗಿದೆ.
ಅಪಘಾತದ ಸ್ಥಳದಿಂದ ಹತ್ತಾರು ಸುಟ್ಟು ಕರಕಲಾದ ಶವಗಳನ್ನು ಅಂಬುಲೆನ್ಸ್ಗಳಲ್ಲಿ ಅಹಮದಾಬಾದ್ನ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಮಾನ ಬಿದ್ದಿರುವ ಪ್ರದೇಶದಲ್ಲಿ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಇರುತ್ತದೆ. ಹೀಗಾಗಿ ಕೆಲವು ಎಂಬಿಬಿಎಸ್ ವಿದ್ಯಾರ್ಥಿಗಳು ಸಹ ಈ ದುರಂತದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ವಿಮಾನದಲ್ಲಿ ಇಬ್ಬರು ಪೈಲಟ್ಗಳು ಹಾಗೂ 10 ಮಂದಿ ಸಿಬ್ಬಂದಿ ಇದ್ದರು. ಅಲ್ಲದೆ, ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ವರದಿಗಳು ತಿಳಿಸುತ್ತಿವೆ.ಇದನ್ನು ಓದಿ –ಅಹಮದಾಬಾದ್ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ : 242 ಮಂದಿ ಸಾವು?
ಘಟನೆಯ ಬಗ್ಗೆ ತಿಳಿದ ಕೂಡಲೇ ವಿಮಾನಯಾನ ಸಚಿವ ರಾಮ್ಮೋಹನ್ ನಾಯ್ಡು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ವಾಪಸಾಗಿದೆ. ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.