RCB ಮಹಿಳಾ ತಂಡಕ್ಕೆ ಎರಡನೆ ಕಿರೀಟ
ವಡೋದರಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವರ್ಷಗಳ ಕಾಲ ಟ್ರೋಫಿಗಾಗಿ ಹೋರಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ…
ಮೈಸೂರು: ಏಳು ಕಡೆ ಲೋಕಾಯುಕ್ತ ದಾಳಿ
ಮೈಸೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳನ್ನು ಸೇರಿ ಒಟ್ಟು ಏಳು ಕಡೆ ಶೋಧ ನಡೆಸಿದರು. ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆಯ ಜೂನಿಯರ್ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್ ಅವರಿಗೆ ಸೇರಿದ ಮೈಸೂರಿನ ವಿಜಯನಗರ, ಕೆ.ಜಿ. ಕೊಪ್ಪಲು ನಿವಾಸಗಳು ಹಾಗೂ ಟಿ.ನರಸೀಪುರ ಕಚೇರಿ ಸೇರಿ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ. ಶೋಧದ ವೇಳೆ ಚಂದ್ರಶೇಖರ್ ಅವರ ಬಳಿ ಸುಮಾರು 1,37,00,000 ರೂ. ಮೌಲ್ಯದ ಸ್ಥಿರ ಆಸ್ತಿ,55 ಲಕ್ಷ ರೂ. ಮೌಲ್ಯದ ಎರಡು ನಿವೇಶನಗಳು,82 ಲಕ್ಷ ರೂ. ಮೌಲ್ಯದ ಒಂದು ಮನೆ ಹಾಗೂ ಕೃಷಿ ಭೂಮಿ ಸೇರಿದಂತೆ ಒಟ್ಟು 2,75,10,300 ರೂ. ಮೌಲ್ಯದ ಚಲಿಸಬಲ್ಲ ಆಸ್ತಿ ಇರುವುದಾಗಿ ದಾಖಲೆಗಳು ಪತ್ತೆಯಾಗಿವೆ. ಇದಲ್ಲದೆ ಶೋಧದ ಸಂದರ್ಭದಲ್ಲಿ 62,00,400 ರೂ. ನಗದು,2,02,39,900 ರೂ. ಮೌಲ್ಯದ ಚಿನ್ನಾಭರಣ,10,70,000 ರೂ. ಮೌಲ್ಯದ ವಾಹನ ಸೇರಿ ಒಟ್ಟು 2,54,10,300 ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಡೆಪ್ಯೂಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿಗೆ ಸಂಬಂಧಿಸಿದಂತೆ ಎರಡು ಮನೆ ಹಾಗೂ ಕಚೇರಿಯಲ್ಲಿ ಶೋಧ ನಡೆಸಲಾಗಿದೆ. ಇವರ ಬಳಿ ಸುಮಾರು 2,34,10,000 ರೂ. ಮೌಲ್ಯದ ಸ್ಥಿರ ಆಸ್ತಿ, 1,03,10,000 ರೂ. ಮೌಲ್ಯದ ನಾಲ್ಕು ನಿವೇಶನಗಳು, 1,31,00,000 ರೂ. ಮೌಲ್ಯದ ಮನೆ ಸೇರಿದಂತೆ ಒಟ್ಟು 1,10,02,829 ರೂ. ಮೌಲ್ಯದ ಚರ ಆಸ್ತಿ ಇರುವುದಾಗಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಶೋಧದ ವೇಳೆ 1,45,340 ರೂ. ನಗದು,75,46,800 ರೂ. ಮೌಲ್ಯದ ಆಭರಣ,19,55,000 ರೂ. ಮೌಲ್ಯದ ವಾಹನ ಹಾಗೂ ಇತರೆ 13,55,689 ರೂ. ಸೇರಿ ಒಟ್ಟು 2,41,77,849 ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಉದ್ದೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.ಈ ಚಂದ್ರಶೇಖರ್ ಯಾರು? ಕೆ.ಆರ್. ಚಂದ್ರಶೇಖರ್ ಅವರು ಮೊದಲಿಗೆ ಗುಲ್ಬರ್ಗದಲ್ಲಿ ಜೂನಿಯರ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು. ಬಳಿಕ ಪಾಂಡವಪುರ ತಾಲ್ಲೂಕು ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸಿದ್ದರು. 2021ರಲ್ಲಿ ಮಹಿಳೆಯೊಬ್ಬರಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಆರೋಪವೂ ಇವರ ಮೇಲಿದೆ. ಬಳಿಕ ಕೆ.ಆರ್.ನಗರ ಜೆಇ ಆಗಿ ವರ್ಗಾವಣೆಗೊಂಡ ಚಂದ್ರಶೇಖರ್, ನಂತರ ಮತ್ತೆ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-6 ಹಾಗೂ ಟಿ.ನರಸೀಪುರ ತಾಲ್ಲೂಕಿನ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಮಗ ಹಾಗೂ ಸೊಸೆಯೂ ಸಹ ಜೂನಿಯರ್ ಎಂಜಿನಿಯರ್ ಆಗಿದ್ದು, ಸದ್ಯ ಲೋಕಾಯುಕ್ತ ಶೋಧಕ್ಕೆ ಒಳಗಾಗಿದ್ದಾರೆ.
ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ…
ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
ನಮ್ಮೆಲ್ಲರ ಜೀವನಪಯಣದಲ್ಲಿ ಕೆಲವರು ಅನಿರೀಕ್ಷಿತವಾಗಿ ಅಮರಿಕೊಂಡು ಅತ್ಯಂತ ಆತ್ಮೀಯವಾಗಿ ಹತ್ತಿರಕ್ಕೆ ಬಂದು ನಿಲ್ಲುತ್ತಾ ನಮ್ಮೊಡನೆ ಸಾಗುತ್ತಾರೆ.…
ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಕಂಪನಿಯ ಅಧ್ಯಕ್ಷ ಡಾ.ಸಿ.ಜೆ. ರಾಯ್ ಅವರು ಇಂದು…
ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ವಿಶೇಷ ತಂಡ ರಚಿಸಲಾಗುವುದು ಎಂದು…
ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
ಹೈದರಾಬಾದ್: ತಿರುಮಲದ ಪವಿತ್ರ ಲಡ್ಡು ಪ್ರಸಾದ ತಯಾರಿಕೆಗೆ ಬಳಸಲಾಗಿದ್ದ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣದ ತನಿಖೆಯಲ್ಲಿ,…
ಲೋಕಾಯುಕ್ತ ದಾಳಿ: ಭೂಸ್ವಾಧೀನಾಧಿಕಾರಿ ಬಳಿ ಕೋಟ್ಯಂತರ ರು. ಆಸ್ತಿ ಪತ್ತೆ
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಲ್ಲಿ ನಿಯೋಜನೆಯ ಮೇರೆಗೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಎನ್.…
‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ
ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಮುಖ್ಯಮಂತ್ರಿ ಆಗುವುದಕ್ಕೆ…
ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯದ ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದ ಅವಧಿಯನ್ನು ಮೂರು ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ.…



