- ಕಮಲ್ ಹಾಸನ್ ವಿರುದ್ಧ ಕರವೇ ಪ್ರವೀಣ್ ಶೆಟ್ಟಿ ಕಿಡಿಕಾರಿಕೆ
ಬೆಂಗಳೂರು: ಕನ್ನಡ ಭಾಷೆಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆಯಿಂದ ನಟ ಕಮಲ್ ಹಾಸನ್ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾಯಕ ಪ್ರವೀಣ್ ಶೆಟ್ಟಿ, “ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದರೆ ಬೆಂಗಳೂರು ಬಂದ್ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಜೂನ್ 5ರಂದು ರಾಜ್ಯದ ಯಾವುದೇ ಭಾಗದಲ್ಲಿಯೂ ಈ ಸಿನಿಮಾ ಬಿಡುಗಡೆಯಾಗಬಾರದು. ಚಿತ್ರ ರಿಲೀಸ್ ಆದರೆ, ಕರ್ನಾಟಕದಲ್ಲಿ ಹೋರಾಟ ಭುಗಿಲೆತ್ತಲಿದೆ ಎಂದು ಅವರು ತಿಳಿಸಿದ್ದಾರೆ. ಥಿಯೇಟರ್ಗಳನ್ನೇ ಧ್ವಂಸ ಮಾಡುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
“ತಮಿಳು ಭಾಷೆಯಿಂದ ಕನ್ನಡ ಹುಟ್ಟಿತು” ಎಂಬ ಕಮಲ್ ಹಾಸನ್ ಅವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಪ್ರವೀಣ್ ಶೆಟ್ಟಿ, “ನಟ ಕಮಲ್ ಹಾಸನ್ ಕೂಡಲೇ ಕ್ಷಮೆ ಕೇಳಬೇಕು. ನಾವು ಕನ್ನಡಿಗರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಹೋರಾಟದ ತೀರ್ಮಾನ ಕೈಗೊಳ್ಳುತ್ತೇವೆ” ಎಂದರು.
ಇದೇ ವೇಳೆ, ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ, ರಾಜ್ಯದಲ್ಲಿ ಅವರ ಯಾವುದೇ ಚಿತ್ರ ಬಿಡುಗಡೆಯನ್ನು ಅವಕಾಶ ನೀಡಲ್ಲ ಎಂದು ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ಫಿಲ್ಮ್ ಚೇಂಬರ್ ಕೂಡ ಎಚ್ಚರಿಕೆ ನೀಡಿದೆ.ಇದನ್ನು ಓದಿ –ಶೀಘ್ರದಲ್ಲೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
ಕನ್ನಡಿಗರ ಗೌರವ, ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ವಿರೋಧಾತ್ಮಕ ಹೇಳಿಕೆ ನೀಡುವವರ ವಿರುದ್ಧ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಮುಂದುವರಿಯುತ್ತಿರುವುದು ಸ್ಪಷ್ಟವಾಗಿದೆ.