ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದಲ್ಲಿ…
ಇನ್ನೆರಡು ದಿನದಲ್ಲಿ ರಾಜ್ಯಕ್ಕೆ ಮುಂಗಾರು; ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು: ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ…
ಡಿಸಿಎಂ ಪರಂ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕಾರ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಹಂತದ ಸಚಿವ…
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ…
ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
ಭಾರತೀಯರನ್ನು ಕಾಡುತ್ತಿರುವ ಒಂದು ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹ ಸಹ ಒಂದಾಗಿದೆ. ಅದು ಎಷ್ಟರ ಮಟ್ಟಿಗೆ…
ಮೈಸೂರು: ಏಳು ಕಡೆ ಲೋಕಾಯುಕ್ತ ದಾಳಿ
ಮೈಸೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳನ್ನು ಸೇರಿ ಒಟ್ಟು ಏಳು ಕಡೆ ಶೋಧ ನಡೆಸಿದರು. ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆಯ ಜೂನಿಯರ್ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್ ಅವರಿಗೆ ಸೇರಿದ ಮೈಸೂರಿನ ವಿಜಯನಗರ, ಕೆ.ಜಿ. ಕೊಪ್ಪಲು ನಿವಾಸಗಳು ಹಾಗೂ ಟಿ.ನರಸೀಪುರ ಕಚೇರಿ ಸೇರಿ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ. ಶೋಧದ ವೇಳೆ ಚಂದ್ರಶೇಖರ್ ಅವರ ಬಳಿ ಸುಮಾರು 1,37,00,000 ರೂ. ಮೌಲ್ಯದ ಸ್ಥಿರ ಆಸ್ತಿ,55 ಲಕ್ಷ ರೂ. ಮೌಲ್ಯದ ಎರಡು ನಿವೇಶನಗಳು,82 ಲಕ್ಷ ರೂ. ಮೌಲ್ಯದ ಒಂದು ಮನೆ ಹಾಗೂ ಕೃಷಿ ಭೂಮಿ ಸೇರಿದಂತೆ ಒಟ್ಟು 2,75,10,300 ರೂ. ಮೌಲ್ಯದ ಚಲಿಸಬಲ್ಲ ಆಸ್ತಿ ಇರುವುದಾಗಿ ದಾಖಲೆಗಳು ಪತ್ತೆಯಾಗಿವೆ. ಇದಲ್ಲದೆ ಶೋಧದ ಸಂದರ್ಭದಲ್ಲಿ 62,00,400 ರೂ. ನಗದು,2,02,39,900 ರೂ. ಮೌಲ್ಯದ ಚಿನ್ನಾಭರಣ,10,70,000 ರೂ. ಮೌಲ್ಯದ ವಾಹನ ಸೇರಿ ಒಟ್ಟು 2,54,10,300 ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಡೆಪ್ಯೂಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿಗೆ ಸಂಬಂಧಿಸಿದಂತೆ ಎರಡು ಮನೆ ಹಾಗೂ ಕಚೇರಿಯಲ್ಲಿ ಶೋಧ ನಡೆಸಲಾಗಿದೆ. ಇವರ ಬಳಿ ಸುಮಾರು 2,34,10,000 ರೂ. ಮೌಲ್ಯದ ಸ್ಥಿರ ಆಸ್ತಿ, 1,03,10,000 ರೂ. ಮೌಲ್ಯದ ನಾಲ್ಕು ನಿವೇಶನಗಳು, 1,31,00,000 ರೂ. ಮೌಲ್ಯದ ಮನೆ ಸೇರಿದಂತೆ ಒಟ್ಟು 1,10,02,829 ರೂ. ಮೌಲ್ಯದ ಚರ ಆಸ್ತಿ ಇರುವುದಾಗಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಶೋಧದ ವೇಳೆ 1,45,340 ರೂ. ನಗದು,75,46,800 ರೂ. ಮೌಲ್ಯದ ಆಭರಣ,19,55,000 ರೂ. ಮೌಲ್ಯದ ವಾಹನ ಹಾಗೂ ಇತರೆ 13,55,689 ರೂ. ಸೇರಿ ಒಟ್ಟು 2,41,77,849 ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಉದ್ದೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.ಈ ಚಂದ್ರಶೇಖರ್ ಯಾರು? ಕೆ.ಆರ್. ಚಂದ್ರಶೇಖರ್ ಅವರು ಮೊದಲಿಗೆ ಗುಲ್ಬರ್ಗದಲ್ಲಿ ಜೂನಿಯರ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು. ಬಳಿಕ ಪಾಂಡವಪುರ ತಾಲ್ಲೂಕು ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸಿದ್ದರು. 2021ರಲ್ಲಿ ಮಹಿಳೆಯೊಬ್ಬರಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಆರೋಪವೂ ಇವರ ಮೇಲಿದೆ. ಬಳಿಕ ಕೆ.ಆರ್.ನಗರ ಜೆಇ ಆಗಿ ವರ್ಗಾವಣೆಗೊಂಡ ಚಂದ್ರಶೇಖರ್, ನಂತರ ಮತ್ತೆ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-6 ಹಾಗೂ ಟಿ.ನರಸೀಪುರ ತಾಲ್ಲೂಕಿನ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಮಗ ಹಾಗೂ ಸೊಸೆಯೂ ಸಹ ಜೂನಿಯರ್ ಎಂಜಿನಿಯರ್ ಆಗಿದ್ದು, ಸದ್ಯ ಲೋಕಾಯುಕ್ತ ಶೋಧಕ್ಕೆ ಒಳಗಾಗಿದ್ದಾರೆ.
ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು
ದಾವಣಗೆರೆ : ಜಿಲ್ಲೆಯ ಆನಗೋಡು ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು…
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಕ್ಷಿಪ್ರ ಭೇಟಿ
ಮೈಸೂರು: ಇಲ್ಲಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ…
ಭಾಗ್ಯದ ಲಕ್ಷ್ಮೀ ಬಾರಮ್ಮಾ(ಬ್ಯಾಂಕರ್ಸ್ ಡೈರಿ)
ಅಂದು ಶುಕ್ರವಾರ. ಸಾಮಾನ್ಯವಾಗಿ ಎಲ್ಲ ಕಡೆಗಳಲ್ಲೂ ಶುಕ್ರವಾರ ಲಕ್ಷ್ಮೀ ಪೂಜೆಯನ್ನು ಮಾಡುವ ಕ್ರಮ ಇದೆ. ಅದು…



