ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
ಭಾರತೀಯರನ್ನು ಕಾಡುತ್ತಿರುವ ಒಂದು ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹ ಸಹ ಒಂದಾಗಿದೆ. ಅದು ಎಷ್ಟರ ಮಟ್ಟಿಗೆ…
ಕದನ ವಿರಾಮದ ಬಳಿಕವೂ ಇರಾನ್ಗೆ ಟ್ರಂಪ್ ಕಠಿಣ ಎಚ್ಚರಿಕೆ
ವಾಷಿಂಗ್ಟನ್: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ…
ಮೈಸೂರು: ಏಳು ಕಡೆ ಲೋಕಾಯುಕ್ತ ದಾಳಿ
ಮೈಸೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳನ್ನು ಸೇರಿ ಒಟ್ಟು ಏಳು ಕಡೆ ಶೋಧ ನಡೆಸಿದರು. ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆಯ ಜೂನಿಯರ್ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್ ಅವರಿಗೆ ಸೇರಿದ ಮೈಸೂರಿನ ವಿಜಯನಗರ, ಕೆ.ಜಿ. ಕೊಪ್ಪಲು ನಿವಾಸಗಳು ಹಾಗೂ ಟಿ.ನರಸೀಪುರ ಕಚೇರಿ ಸೇರಿ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ. ಶೋಧದ ವೇಳೆ ಚಂದ್ರಶೇಖರ್ ಅವರ ಬಳಿ ಸುಮಾರು 1,37,00,000 ರೂ. ಮೌಲ್ಯದ ಸ್ಥಿರ ಆಸ್ತಿ,55 ಲಕ್ಷ ರೂ. ಮೌಲ್ಯದ ಎರಡು ನಿವೇಶನಗಳು,82 ಲಕ್ಷ ರೂ. ಮೌಲ್ಯದ ಒಂದು ಮನೆ ಹಾಗೂ ಕೃಷಿ ಭೂಮಿ ಸೇರಿದಂತೆ ಒಟ್ಟು 2,75,10,300 ರೂ. ಮೌಲ್ಯದ ಚಲಿಸಬಲ್ಲ ಆಸ್ತಿ ಇರುವುದಾಗಿ ದಾಖಲೆಗಳು ಪತ್ತೆಯಾಗಿವೆ. ಇದಲ್ಲದೆ ಶೋಧದ ಸಂದರ್ಭದಲ್ಲಿ 62,00,400 ರೂ. ನಗದು,2,02,39,900 ರೂ. ಮೌಲ್ಯದ ಚಿನ್ನಾಭರಣ,10,70,000 ರೂ. ಮೌಲ್ಯದ ವಾಹನ ಸೇರಿ ಒಟ್ಟು 2,54,10,300 ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಡೆಪ್ಯೂಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿಗೆ ಸಂಬಂಧಿಸಿದಂತೆ ಎರಡು ಮನೆ ಹಾಗೂ ಕಚೇರಿಯಲ್ಲಿ ಶೋಧ ನಡೆಸಲಾಗಿದೆ. ಇವರ ಬಳಿ ಸುಮಾರು 2,34,10,000 ರೂ. ಮೌಲ್ಯದ ಸ್ಥಿರ ಆಸ್ತಿ, 1,03,10,000 ರೂ. ಮೌಲ್ಯದ ನಾಲ್ಕು ನಿವೇಶನಗಳು, 1,31,00,000 ರೂ. ಮೌಲ್ಯದ ಮನೆ ಸೇರಿದಂತೆ ಒಟ್ಟು 1,10,02,829 ರೂ. ಮೌಲ್ಯದ ಚರ ಆಸ್ತಿ ಇರುವುದಾಗಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಶೋಧದ ವೇಳೆ 1,45,340 ರೂ. ನಗದು,75,46,800 ರೂ. ಮೌಲ್ಯದ ಆಭರಣ,19,55,000 ರೂ. ಮೌಲ್ಯದ ವಾಹನ ಹಾಗೂ ಇತರೆ 13,55,689 ರೂ. ಸೇರಿ ಒಟ್ಟು 2,41,77,849 ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಉದ್ದೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.ಈ ಚಂದ್ರಶೇಖರ್ ಯಾರು? ಕೆ.ಆರ್. ಚಂದ್ರಶೇಖರ್ ಅವರು ಮೊದಲಿಗೆ ಗುಲ್ಬರ್ಗದಲ್ಲಿ ಜೂನಿಯರ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು. ಬಳಿಕ ಪಾಂಡವಪುರ ತಾಲ್ಲೂಕು ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸಿದ್ದರು. 2021ರಲ್ಲಿ ಮಹಿಳೆಯೊಬ್ಬರಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಆರೋಪವೂ ಇವರ ಮೇಲಿದೆ. ಬಳಿಕ ಕೆ.ಆರ್.ನಗರ ಜೆಇ ಆಗಿ ವರ್ಗಾವಣೆಗೊಂಡ ಚಂದ್ರಶೇಖರ್, ನಂತರ ಮತ್ತೆ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-6 ಹಾಗೂ ಟಿ.ನರಸೀಪುರ ತಾಲ್ಲೂಕಿನ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಮಗ ಹಾಗೂ ಸೊಸೆಯೂ ಸಹ ಜೂನಿಯರ್ ಎಂಜಿನಿಯರ್ ಆಗಿದ್ದು, ಸದ್ಯ ಲೋಕಾಯುಕ್ತ ಶೋಧಕ್ಕೆ ಒಳಗಾಗಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಕ್ಷಿಪ್ರ ಭೇಟಿ
ಮೈಸೂರು: ಇಲ್ಲಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ…
ಯುಗದ ಕವಿ ಜಗದ ಕವಿ …ವಿಶ್ವ ಮಾನವ ರಸಋಷಿ ಕುವೆಂಪು
ವರ್ಷಗಳ ಹಿಂದೆ ಎಲ್ಲೋ ಓದಿದ ನೆನಪು. ಒಂದೇ ಮನೆಯ ಇಬ್ಬರು ಸಾಹಿತಿ ಸಹೋದರರ ನಡುವೆ ನಡೆದ…
ಭಾಗ್ಯದ ಲಕ್ಷ್ಮೀ ಬಾರಮ್ಮಾ(ಬ್ಯಾಂಕರ್ಸ್ ಡೈರಿ)
ಅಂದು ಶುಕ್ರವಾರ. ಸಾಮಾನ್ಯವಾಗಿ ಎಲ್ಲ ಕಡೆಗಳಲ್ಲೂ ಶುಕ್ರವಾರ ಲಕ್ಷ್ಮೀ ಪೂಜೆಯನ್ನು ಮಾಡುವ ಕ್ರಮ ಇದೆ. ಅದು…
ಆಸ್ಪತ್ರೆಯಲ್ಲಿ ಬೆಂಕಿ ದುರಂತ: ಐಸಿಯುನಲ್ಲಿ 8 ಮಂದಿ ರೋಗಿಗಳ ಸಜೀವ ದಹನ
ರಾಜಸ್ಥಾನ: ರಾಜಧಾನಿ ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ (SMS) ಆಸ್ಪತ್ರೆಯ ಆಘಾತ ಕೇಂದ್ರದ…
Asia Cup 2025 :ನಾಳೆಯಿಂದ ಏಷ್ಯಾ ಕಪ್ 2025 ಪ್ರಾರಂಭ
ದುಬೈ: ಏಷ್ಯಾ ಕಪ್ 2025 ಟೂರ್ನಿಯು ನಾಳೆ (ಸೆಪ್ಟೆಂಬರ್ 9)ರಿಂದ ಆರಂಭವಾಗುತ್ತಿದ್ದು, ಒಟ್ಟು 8 ತಂಡಗಳು…
ಜನಿವಾರ ಧಾರಣೆಯ ಮಹತ್ವ
ಬ್ರಾಹ್ಮಣನೆಂದೆನಿಸಿ ವೇದಾಧ್ಯಯನಗಳನ್ನು ಮಾಡುವ ಯೋಗ್ಯನಿಗೆ ಉತ್ಸರ್ಜನ ಉಪಾಕರ್ಮಗಳು ಇವು ತುಂಬ ಮಹತ್ವದ್ದು. ವೇದಾಧ್ಯಯನವನ್ನು ಗುರುಗಳಿಗೆ ಅರ್ಪಿಸುವದು…



