ಮೈಸೂರು: ಕನ್ನಡಾಂಬೆ ರಕ್ಷಣಾ ವೇದಿಕೆವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ಸರಸ್ವತಿ ಕನ್ವೆನ್ಷನ್ ಹಾಲ್ ನಲ್ಲಿ ಜೂ.೧೮ರಂದು ಶ್ರೀ ಬಸವ ಜುಂಂತಿ ಹಾಗೂ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯ ಅಂಗವಾಗಿ ‘ಪೌರಕಾರ್ಮಿಕರಿಗೆ ಉಚಿತ ಬಟ್ಟೆ ವಿಚಾರಣೆ ಹಾಗೂ ಪೌರಕಾರ್ಮಿಕರ ಜೊತೆಗೆ ಸಹಪಂಕ್ತಿ ಭೋಜನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಬಿ.ಬಿ.ರಾಜಶೇಖರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿುಂಲ್ಲಿ ವಾತನಾಡಿದ ಅವರು, ಅಂದು ಬೆ.೧೧ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪಾಂಡವಪುರ ಬೇಬಿ ಬೆಟ್ಟದ ಶ್ರೀರಾಮೋಂಗೇಶ್ವರ ಮಠದ ಶ್ರೀ ಶಿವಬಸವ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮ್ಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಯಾಗಿ ಶ್ರೀ ಯೋಗನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಬಿಜೆಪಿ ಮುಖಂಡ ಕವೀಶ್ಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವ್, ಜಿಲ್ಲಾ ಪಂಚಾಯತ್ ಸದಸ್ಯ ರಾಕೇಶ್ ಪಾಪಣ್ಣ, ಕಾಂಗ್ರೆಸ್ ಮುಖಂಡ ವರುಣ್ ಮಹೇಶ್, ಹೂಟಗಳ್ಳಿ ನಗರಸಭೆ ಪೌರಾಯುಕ್ತ ಚಂದ್ರಶೇಖರ್, ವಿಜಯನಗರ ಪೊಲೀಸ್ ಠಾಣೆ ಅಧೀಕ್ಷಕ ಸುರೇಶ್ಕುಮಾರ್, ಜೆಡಿಎಸ್ ಮುಖಂಡ ಸುರೇಶ್ ಮತ್ತಿತರು ಪಾಲ್ಗೊಳ್ಳಲಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ೩೪೦ಜನ ಪೌರಕಾರ್ಮಿಕರು ಮತ್ತು ನಲ್ಲಿ ಕಾರ್ಮಿಕರಿಗೆ ಉಚಿತ ಬಟ್ಟೆ ವಿಚಾರಣೆ ಮಾಡಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯ ಖಜಾಂಚಿ ನಂಜುಂಡ, ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಮಂಜುಳಾ, ತಾಲ್ಲೂಕು ಅಧ್ಯಕ್ಷ ಸಂತೋಷ್, ಕಾರ್ಯದರ್ಶಿ ಅನುರಾಜ್ ಮತ್ತಿತರರು ಹಾಜರಿದ್ದರು.