ಮೈಸೂರು: ಜೆ.ಪಿ.ನಗರ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಜೂ.೨೨ರಂದು ಉಚಿತ ತಪಾಸಣಾ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ನೇಹ ನಿಧಿ ಮುತ್ತಿನ ಸಹಕಾರ ಸಂಘದ ಅಧ್ಯಕ್ಷ ಚೆಲುವಯ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ರೋಟರಿ ಜಯಪ್ರಕಾಶನಗರ, ರೋಟರಿ ಜಯಪ್ರಕಾಶನಗರ ಚಾರಿಟಬಲ್ ಟ್ರಸ್ಟ್, ರೋಟರಿ ಕ್ಲಬ್ ಆಫ್ ಕೃಷ್ಣರಾಜ, ಜೆ.ಪಿ.ನಗರ ಸ್ಪೊರ್ಟ್ಸ್ ಕ್ಲಬ್, ಲಯನ್ಸ್ ಕ್ಲಬ್ ಜೆ.ಪಿ.ನಗರ, ಸ್ನೇಹ ನಿಧಿ ಪತ್ತಿನ ಸಹಕಾರ ಸಂಘ, ಅಷ್ಟೈಷ್ವರ್ಯ ಸಿದ್ಧಿವಿನಾಯಕ ದೇವಸ್ಥಾನ ಇವುಗಳ ಸಹಯೋಗದಲ್ಲಿ ಈ ಶಿಬಿರ ನಡೆಯಲಿದೆ.
ಅಂದು ಬೆಳಿಗ್ಗೆ ೮ರಿಂದ ಮಧ್ಯಾಹ್ನ ೧೨.೩೦ರವರೆಗೆ ನಡೆಯಲಿದೆ. ಕಣ್ಣಿನ ಪೊರೆ, ಕಣ್ಣಿನಲ್ಲಿ ನೀರು ಸೋರುವಿಕೆ, ಹತ್ತಿರ ಮತ್ತು ದೂರ ದೃಷ್ಟಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನ ಇತ್ಯಾದಿ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತವಾಗಿ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಶಿಬಿರಕ್ಕೆ ಬರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಣ್ಣಿನಲ್ಲಿ ಪೊರೆ ಇದ್ದವರನ್ನು ಅದೇ ದಿನ ಮಧ್ಯಾಹ್ನ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗುವುದು. ಶಸ್ತ್ರ ಚಿಕಿತ್ಸೆಗಾಗಿ ಬರುವವರು ಆಧಾರ್ ಕಾರ್ಡ್ ಜೆರಾಕ್ಸ್ ಹಾಗೂ ಮೊಬೈಲ್ ನಂಬರ್ ಅನ್ನು ಕಡ್ಡಾಯವಾಗಿ ತರಬೇಕು. ಊಟ, ವಸತಿ ಹಾಗೂ ಪ್ರಯಾಣ ವ್ಯವಸ್ಥೆ ಉಚಿತವಾಗಿರುತ್ತದೆ ಎಂದು ತಿಳಿಸಿದರು.ಇದನ್ನು ಓದಿ –ಗುಜರಾತ್ ಕರಕುಶಲ ಉತ್ಸವಕ್ಕೆ ಅದ್ಧೂರಿ ಚಾಲನೆ
ರೋಟರಿ ಜಯಪ್ರಕಾಶ್ ನಗರ ಸಂಸ್ಥೆ ಅಧ್ಯಕ್ಷ ಡಿ. ಕೃಷ್ಣೇಅರಸ್, ಕಾರ್ಯದರ್ಶಿ ಡಾ.ಡಿ.ಎಂ.ನಾಗರಾಜು, ಸ್ನೇಹ ನಿಧಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಕೆ.ಎನ್. ಪ್ರಮೋದ್ ಚಂದನ್, ರೋಟರಿ ಕ್ಲಬ್ ಆಫ್ ಕೃಷ್ಣರಾಜದ ಅಧ್ಯಕ್ಷ ಜೆ. ವೆಂಕಟೇಶ್ ಹಾಜರಿದ್ದರು.