ಮೈಸೂರು: ವಾರ್ಡ್ ನಂಬರ್ 22 ರ ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಶಾಸಕ ಕೆ.ಹರೀಶ್ ಗೌಡ ಸೋಮವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಶ್ರಮಿಕ ವರ್ಗದವರಿಗೆ ಕಡಿಮೆ ವೆಚ್ಚದಲ್ಲಿ ತಿಂಡಿ, ಊಟ ಸಿಗಬೇಕು ಎಂಬ ಉದ್ದೇಶದಿಂದ ಜನ ನಿಬಿಡ ಪ್ರದೇಶಗಳಲ್ಲಿ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಿದರು. ಈ ಅವಧಿಯಲ್ಲಿ ಇತ್ತೀಚೆಗೆ ಸ್ಥಾಪಿತವಾದ 9 ಇಂದಿರಾ ಕ್ಯಾಂಟೀನ್ ಗಳನ್ನು ಮೊನ್ನೆ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಉದ್ಘಾಟಿಸಿದರು.
ನನ್ನ ಕ್ಷೇತ್ರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರ ಬಹು ದಿನದ ಬೇಡಿಕೆಯಾದ ಈ ಕ್ಯಾಂಟೀನ್ ಉದ್ಘಾಟಿಸಿರುವುದು ಸಂತೋಷವಾಯಿತು. ನನ್ನ ಮನವಿಯ ಮೇರೆಗೆ ಸ್ಥಾಪಿತವಾದ್ದರಿಂದ ಕಾಲೇಜಿನ ಆಡಳಿತ ಮಂಡಳಿ ಆಹ್ವಾನದ ಮೇರೆಗೆ ವಿದ್ಯಾರ್ಥಿನಿಯರು ಪರಿಶೀಲಿಸಿ ಇಲ್ಲಿಯೇ ಉಪಹಾರ ಸೇವಿಸಿದ್ದೇನೆಂದರು.ಇದನ್ನು ಓದಿ –RTE ಅಡಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಆದೇಶ
ಗುತ್ತಿಗೆದಾರರಿಗೆ ಆಹಾರದ ಗುಣಮಟ್ಟ ಹಾಗೂ ಸ್ವಚ್ಚತೆಯನ್ನು ಕಾಪಾಡಬೇಕು. ಪಾಲಿಕೆ ಅಧಿಕಾರಿಗಳಿಗೆ ಈ ಬಗ್ಗೆ ಆಗಾಗ ಗಮನ ಹರಿಸುವಂತೆ ತಾಕೀತು ಮಾಡಿದ್ದೇನೆಂದರು.