ಬೆಂಗಳೂರು, ಜೂನ್ 5: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಐಪಿಎಲ್ ವಿಜಯೋತ್ಸವದ ಸಂದರ್ಭ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿದೆ.
ಈ ಘಟನೆಯ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಪಡೆಯಲು ಹೈಕೋರ್ಟ್ ಸೂಚನೆ ನೀಡಿದ್ದು, ವಿಚಾರಣೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ನಿಗದಿಪಡಿಸಿದೆ. ಈ ಸಮಯದಲ್ಲಿ ಹೆಚ್ಚಿನ ಮಾಹಿತಿ ಮತ್ತು ಸ್ಪಷ್ಟನೆಗಳನ್ನು ನ್ಯಾಯಾಲಯ ಕೇಳಲಿದೆ.
ಕಾಲ್ತುಳಿತದ ಪರಿಣಾಮ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿರುವುದೂ ಗಮನಾರ್ಹ.
ಇದರ ಜೊತೆಗೆ, ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಎಸ್ಸಿಎ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.ಇದನ್ನು ಓದಿ –ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ ಮುಂಗಾರು ಅಧಿವೇಶನ
ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುರ್ಘಟನೆಯ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆಯುವ ನಿರೀಕ್ಷೆಯಿದೆ. ನ್ಯಾಯಾಲಯದ ಹಸ್ತಕ್ಷೇಪದಿಂದ ಶಿಸ್ತು ಮತ್ತು ಹೊಣೆಗಾರಿಕೆಗೆ ದಾರಿ ಅನಿವಾರ್ಯವಾಗುವ ಸಾಧ್ಯತೆ ಇದೆ.