ಬೆಂಗಳೂರು: ಹೈಕಮಾಂಡ್ ತೀರ್ಮಾನಿಸುವವರೆಗೆ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಜೆಟ್ ಚರ್ಚೆ ವೇಳೆ ಡಿಕೆ ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಕುರಿತ ವಿಚಾರವನ್ನು ಉಲ್ಲೇಖಿಸಿ ವಿಪಕ್ಷಗಳು ಸಿಎಂಗೆ ಟೀಕಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದಲ್ಲಿ ಎಲ್ಲ ಶಾಸಕರಿಗೂ ಸಿಎಂ ಆಗುವ ಅರ್ಹತೆ ಇದೆ. ಯಾರಾದರೂ ಸಿಎಂ ಆದರೂ ನನಗೆ ಸಂತೋಷವೇ ಎಂದು ಹೇಳಿದರು.
ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಅಷ್ಟರವರೆಗೆ ನಾನು ಸಿಎಂ ಆಗಿರುತ್ತೇನೆ ಎಂದರು. ಖಾದರ್ ಸ್ಪೀಕರ್ ಆಗಿಯೇ ಮುಂದುವರೆಯುತ್ತಾರೆ, ವಿಪಕ್ಷಗಳ ಟೀಕೆಗಳಿಗೆ ಅವರು ಮಣಿಯುವುದಿಲ್ಲ ಎಂದು ಹೇಳಿದರು.
ಇನ್ನೂ ಅಶೋಕ್ ಸೇರಿದಂತೆ ಇತರ ನಾಯಕರಿಗೂ ಸಿಎಂ ಆಗುವ ಆಸೆ ಇರಬಹುದು. ಎಂ.ಬಿ. ಪಾಟೀಲ್, ಮುನಿಯಪ್ಪ, ಖಂಡ್ರೆ, ಶಿವಾನಂದ ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ನಾಯಕರಿಗೆ ಅವಕಾಶ ಸಿಕ್ಕರೆ ಸಿಎಂ ಆಗುವ ಸಾಮರ್ಥ್ಯ ಇದೆ ಎಂದು ಸಿದ್ದರಾಮಯ್ಯ ಹೇಳಿದರು.ಇದನ್ನು ಓದಿ –LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ
ಎಲ್ಲರಿಗೂ ಯೋಗ್ಯತೆ ಇದ್ದರೂ ಅವಕಾಶ ಸಿಗುವುದು ಮುಖ್ಯ ಎಂದು ಹೇಳಿದ ಅವರು, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಪುನರುಚ್ಚರಿಸಿದರು.








