ಹಾಸನ, ಜೂನ್ 17: ಹಾಸನ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸಕಲೇಶಪುರ, ಆಲೂರು, ಬೇಲೂರು ಸೇರಿದಂತೆ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಹೇಮಾವತಿ ಜಲಾಶಯಕ್ಕೆ ಮದುವರಿದ ಒಳಹರಿವು ಹೆಚ್ಚಾಗಿದೆ.
ಸಕಲೇಶಪುರ ಮತ್ತು ಚಿಕ್ಕಮಗಳೂರು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಳೆ ಹೇಮಾವತಿ ಜಲಾಶಯ ಗೆ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿರುವಂತಾಗಿದೆ.
ಜಲಾಶಯಕ್ಕೆ ಪ್ರಸ್ತುತ ಸುಮಾರು 8,276 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅದರೊಂದಿಗೆ ನದಿ ಮತ್ತು ನಾಲೆಗಳ ಮೂಲಕ 350 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಇದನ್ನು ಓದಿ –ರೈಲ್ವೆ ಇಲಾಖೆಯಲ್ಲಿ 6374 ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ
ಈ ಭಾರೀ ಮಳೆಯಿಂದಾಗಿ ಹಾಸನ ಜಿಲ್ಲೆಯ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ ಮತ್ತು ದೈನಂದಿನ ಜೀವನ ವ್ಯತ್ಯಯಗೊಳ್ಳುತ್ತಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಡುವಂತೆ ಕ್ರಮ ಕೈಗೊಂಡಿದ್ದಾರೆ.