ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆ ನೀಡಿರುವ ಗೈಡ್ಲೈನ್ಸ್ ಪ್ರಕಾರ, ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಅಥವಾ ಇತರ ಕೋವಿಡ್ ಸಂಬಂಧಿತ ಲಕ್ಷಣಗಳು ಇದ್ದರೆ ಅವರನ್ನು ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ನಂತರವೇ ಅವರು ಶಾಲೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಮಕ್ಕಳಲ್ಲದೇ, ಶಿಕ್ಷಕರು ಅಥವಾ ಶಾಲಾ ಸಿಬ್ಬಂದಿಯಲ್ಲೂ ಕೋವಿಡ್ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಮನೆಗೆ ಕಳುಹಿಸಬೇಕು ಹಾಗೂ ಅಗತ್ಯ ವೈದ್ಯಕೀಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರಿಂದಾಗಿ, ಶಾಲೆಗಳೊಳಗೆ ಶುದ್ಧತೆ, ಸೋಪಿನಿಂದ ಕೈತೊಳೆಯುವ ವ್ಯವಸ್ಥೆ, ಮಾಸ್ಕ್ ಧರಿಸುವ ಜಾಗೃತಿ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವಂತೂ ಗಟ್ಟಿ ಕ್ರಮಗಳನ್ನು ತೆಗೆದುಕೊಳ್ಳಬೇಕು.ಇದನ್ನು ಓದಿ –ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉಗುಳಿದರೆ ₹1,000 ದಂಡ
ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಈ ಕುರಿತು ಸೂಚನೆ ನೀಡಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಬೋಧಕರಿಗೆ ಹಾಗೂ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.