ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಎದುರಾಗಿದೆ. ಆರೋಪಿಗಳ ಪರವಾಗಿ ಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಸಲಾಗಿದ್ದು, ತನಿಖೆಯ ವಿಧಾನ ಕುರಿತು ಪ್ರಶ್ನೆ ಎತ್ತಲಾಗಿದೆ.
ಆರೋಪಿಗಳು, ತಮ್ಮ ಮೊಬೈಲ್ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆಯಲಾಗಿಲ್ಲ. ಬೇರೆಡೆ ವಶಕ್ಕೆ ಪಡೆದು ಠಾಣೆಯಲ್ಲಿ ಪಡೆದಂತೆ ದಾಖಲಿಸಲಾಗಿದೆ ಎಂದು ದೂರಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿ ಸಲ್ಲಿಸಿದ ಫೋಟೋದಲ್ಲಿ ಬಿಳಿ ಟೈಲ್ಸ್ ಕಾಣಿಸುತ್ತವೆ. ಆದರೆ ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿಯ ಮೊಜಾಕ್ ನೆಲವಿದೆ. ಹೀಗಾಗಿ ಪ್ರಕರಣದ ದಾರಿ ತಪ್ಪಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ, ನ್ಯಾಯಾಧೀಶರು ಸ್ವತಃ ಜೈಲು ಹಾಗೂ ಠಾಣೆಗೆ ಭೇಟಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.ಇದನ್ನು ಓದಿ –ಚಿನ್ನದ ಬೆಲೆ ಮೇಲ್ವಿಚಾರಣೆ – ನಿರ್ಮಲಾ ಸೀತಾರಾಮನ್
ಅಲ್ಲದೆ, ಠಾಣೆಯ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಯಾವುದೇ ಬದಲಾವಣೆ ಮಾಡದಂತೆ ಕ್ರಮ ಕೈಗೊಳ್ಳಬೇಕೆಂದು ಅರ್ಜಿಯಲ್ಲಿ ಕೇಳಲಾಗಿದೆ. ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ ವಿಚಾರಣೆ ದಿನಾಂಕ ನಿಗದಿ ಮಾಡಿದ್ದು, ಮುಂದಿನ ವಿಚಾರಣೆವರೆಗೆ ಸಿಸಿಟಿವಿ ದೃಶ್ಯಗಳನ್ನು ನಾಶಪಡಿಸಬಾರದು ಎಂದು ಪೊಲೀಸರಿಗೆ ಸೂಚನೆ ನೀಡಿದೆ.








