ಮೈಸೂರು: ರಾಷ್ಟ್ರಪತಿ ಗಳಾದ ದ್ರೌಪದಿ ಮುರ್ಮು ಅವರು ಸೆ.1 ರಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ.
ಈ ಸಂಬಂಧ ಅಗತ್ಯ ಸಿದ್ದತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರಪತಿಗಳು ಆಗಮನದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳು ರಾಡಿಷನ್ ಬ್ಲೂ ನಲ್ಲಿ ವಾಸ್ತವ್ಯ ಮಾಡುವರು. ಈ ಸಂಬಂಧ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು. ರಾಷ್ಟ್ರಪತಿಗಳು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಿಂಗ್ ರೋಡ್, ಆಯಿಷ್ ನಿಂದ ರಾಡಿಷನ್ ಬ್ಲೂ ವರೆಗಿನ ರಸ್ತೆಗಳು ಸ್ವಚ್ಚತೆ ನಗರಪಾಲಿಕೆ, ಮುಡಾ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಬಂಧಿಸಿದ ಅಧಿಕಾರಿಗಳು ಈ ಜವಾಬ್ದಾರಿ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ, ಡಿಸಿಪಿ ಸುಂದರ ರಾಜ್, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಪುಪ್ಪಾವತಿ ಇನ್ನಿತರರು ಉಪಸ್ಥಿತರಿದ್ದರು.