By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
    Politics
    Politics is the art of looking for trouble, finding it everywhere, diagnosing it incorrectly and applying the wrong remedies.
    Show More
    Top News
    Latest News
  • Articles
    ArticlesShow More
    ನಾನು ಕಂಡಂತೆ ಜೀವನ ಶೈಲಿಯಲ್ಲಿ ಬದಲಾವಣೆ
    August 3, 2025
    ಪಾರಂಪರಿಕ ಹಣ್ಣು ಬೇಲದ ಉಪಯೋಗಗಳು
    August 2, 2025
    ಕಣ್ಣಿನ ಮೇಕಪ್ ಬದಿಗೊತ್ತಿ ಕಣ್ಣನ್ನು ಕಾಪಾಡಿ
    August 1, 2025
    ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು | ಆಗಸ್ಟ್ 01 ವ್ಯಸನ ಮುಕ್ತ ದಿನ
    August 1, 2025
    ನಾಗರ ಚೌತಿ ಮತ್ತು ಪಂಚಮಿ
    July 28, 2025
  • Sports
  • National
  • International
  • Crime
  • Contact Us
Reading: ಬೆಟ್ಟದ ಸೇವೆ ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ
Share
Font ResizerAa
VarthamanVarthaman
  • Home
  • Karnataka
  • Politics
  • Articles
  • Sports
  • National
  • International
  • Crime
  • Contact Us
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
  • Articles
  • Sports
  • National
  • International
  • Crime
  • Contact Us
Follow US
Varthaman > Blog > Karnataka > Mysore > ಬೆಟ್ಟದ ಸೇವೆ ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ
KarnatakaMysoreTrending

ಬೆಟ್ಟದ ಸೇವೆ ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ

Team Varthaman
Last updated: June 17, 2025 2:01 pm
Team Varthaman Published June 17, 2025
Share
SHARE

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಸ್ಥಳೀಯ ನಿವಾಸಿಗಳಿಗೆ ಕುಡಿಯುವ ನೀರು, ಆಷಾಢದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಹಾಗೂ ತಾಯಿ ಚಾಮುಂಡೇಶ್ವರಿ ದೇವಿಯ ಸೇವೆಗಳ ಶುಲ್ಕಗಳನ್ನು ಏಕಾಏಕೀ ಅತೀ ಹೆಚ್ಚು ಏರಿಕೆ ಮಾಡಿರುವುದನ್ನು ಖಂಡಿಸಿ ಇಂದು ಪ್ರತಿಭಟನೆಯನ್ನು ನಡೆಸಲಾಯಿತು.

ನಾಡ ದೇವತೆ ತಾಯಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಸರಿಯಾಗಿ ಕುಡಿಯುವ ನೀರೇ ಇಲ್ಲ.  5-6 ದಿನಗಳಿಗೊಮ್ಮೆ ಚಾಮುಂಡಿ ಬೆಟ್ಟಕ್ಕೆ ನೀರನ್ನು ಬಿಡಲಾಗುತ್ತಿದೆ. ದಿನಾಲು ನೀರಿಲ್ಲದೆ, ಅಲ್ಲಿನ ಸ್ಥಳೀಯ ನಿವಾಸಿಗಳು ಪರದಾಡುತ್ತಿದ್ದಾರೆ.  ಬಹಳ ವರ್ಷಗಳ ಹಿಂದೆಯೇ ಕುಡಿಯುವ ನೀರಿಗಾಗಿ ಬೆಟ್ಟಕ್ಕೆ ಹೊಸ ಪೈಪ್ ಲೈನ್ ಅನ್ನು ಹಾಕಲು ಕಾಮಗಾರಿ ಶುರು ಮಾಡಿದರೂ,  ಇನ್ನೂ ಪೂರ್ಣವಾಗಿ ಕೆಲಸ ಮುಗಿದಿಲ್ಲದ ಪರಿಣಾಮ ಬೆಟ್ಟದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ. ಸರ್ಕಾರ ಇಷ್ಟೆಲ್ಲಾ ಆದಾಯವಿರುವ ಬೆಟ್ಟಕ್ಕೆ ಸಮರ್ಪಕವಾಗಿ ದಿನಾಲು ನೀರನ್ನು ಬಿಡಬೇಕು.

ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಸರಿಯಾದ ಮೂಲಭೂತ ಸೌಕರ್ಯಗಳೇ ಇಲ್ಲ. ಕುಡಿಯಲು ಶುಚಿಯಾದ ಉಚಿತ ನೀರಿನ ವ್ಯವಸ್ಥೆಯಾಗಲಿ, ಸುಸಜ್ಜಿತ ಶೌಚಾಲಯಗಳಾಗಲಿ, ಹೊರಗಿನಿಂದ ಬರುವವರಿಗೆ ಮಡಿಯಾಗಿ ದೇವರ ದರ್ಶನ ಮಾಡಲು ಸ್ನಾನದ ಗೃಹಗಳಾಗಲಿ ಇಲ್ಲವೇ ಇಲ್ಲ. ಈಗಿರುವ ಒಂದೇ ಶೌಚಾಲಯದಲ್ಲಿ ಒಂದಕ್ಕೆ ( ಮೂತ್ರ ವಿಸರ್ಜನೆ ) 5 ರೂ ಹಾಗೂ ಎರಡಕ್ಕೆ (ಮಲ ವಿಸರ್ಜನೆ )10 ರೂ. ಗಳನ್ನು ವಸೂಲಿ ಮಾಡಲಾಗುತ್ತಿದೆ. ಇದು ಉಚಿತ ಮಾಡಬೇಕು. ಈಗ ಆಷಾಢದಲ್ಲಂತೂ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಸಮಯದಲ್ಲಿ ಸರ್ಕಾರ ಇವುಗಳ ಬಗ್ಗೆ ಗಮನ ಹರಿಸಿ ಮೂಲಭೂತ ಸೌಕರ್ಯಗಳನ್ನು ಈ ಕೂಡಲೇ ಕಲ್ಪಿಸಬೇಕು.

Join WhatsApp Group

ರಾಜ್ಯ ಸರ್ಕಾರ ಅಧಿಕಾರಕ್ಕೆ ಬರಲು 5 ಬಿಟ್ಟಿ ಭಾಗ್ಯಗಳನ್ನು ಘೋಷಿಸಿ, ಆ ಯೋಜನೆಗಳಿಗೆ ಹಣ ಪೂರೈಸಲು ಆಗದೆ ಈಗ ಚಾಮುಂಡೇಶ್ವರಿ ದೇವಿಯ ಸೇವೆಗಳ ಶುಲ್ಕಗಳನ್ನು (ಅಭಿಷೇಕದ ಶುಲ್ಕವನ್ನು) ಏಕಾಏಕಿ 300 ರೂ ನಿಂದ 550 ರೂ ಗಳಿಗೆ ಏರಿಸಿರುವುದು ಭಕ್ತಾದಿಗಳಿಗೆ ಅತ್ಯಂತ ನೋವಿನ ಸಂಗತಿಯಾಗಿದೆ. ಭಕ್ತಾದಿಗಳ ಧಾರ್ಮಿಕ ಆಚರಣೆ ಮೇಲೆ ಕಣ್ಣಿಟ್ಟು ಭಕ್ತಾದಿಗಳಿಂದ ಬಿಟ್ಟಿ ಭಾಗ್ಯಗಳಿಗೆ ಹಣವನ್ನು ಹೊಂದಿಸಲು ಹೊರಟಿರುವುದು ಸರ್ಕಾರದ ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಸರ್ಕಾರ ಈ ಕೂಡಲೇ ಏರಿಸಿರುವ ಅಭಿಷೇಕದ ಶುಲ್ಕವನ್ನು 300 ರೂ. ಗೆ ಯಥಾ ಸ್ಥಿತಿಗೆ ತರಬೇಕೆಂದು ಆಗ್ರಹಿಸುತ್ತಿದ್ದೇವೆ.

ಸರ್ಕಾರ ಈ ವರ್ಷ ಆಷಾಡ ಶುಕ್ರವಾರದ ವಿಶೇಷ ದರ್ಶನಕ್ಕಾಗಿ ಬೆಟ್ಟಕ್ಕೆ ರೂ.  2000 ಟಿಕೆಟ್ ಮಾಡಿರುವುದು ಅತ್ಯಂತ ಖಂಡನೀಯ.  ಸರ್ಕಾರ ಬಿಟ್ಟಿ ಭಾಗ್ಯಗಳಿಗಾಗಿ ಸಿಕ್ಕ ಸಿಕ್ಕ ಕಡೆಯಿಂದ ಸಾರ್ವಜನಿಕರಿಂದ (ಭಕ್ತಾದಿಗಳಿಂದ) ಹಣ ದೋಚಿ ಹಗಲು ದರೋಡೆ ಮಾಡುತ್ತಿದೆ. ದೇವರ ದರ್ಶನಕ್ಕೆ ಸರಕಾರ ಇಷ್ಟೊಂದು ದುಬಾರಿ ಟಿಕೆಟ್ ಮಾಡಲು ಹೊರಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ.  ಸರ್ಕಾರ ಜನರಿಗೆ ಒಂದು ಕೈಯಲ್ಲಿ ಕೊಟ್ಟು ದೇವರ ಹೆಸರಿನಿಂದ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಹಾಗೂ ಈ ಕೂಡಲೇ 2000 ರೂ ದುಬಾರಿ ಟಿಕೆಟ್ ಅನ್ನು ರದ್ದುಗೊಳಿಸಿ (ಹಿಂಪಡೆದು) ಪ್ರತಿಯೊಬ್ಬರಿಗೂ ಹಣದ ಭೇದ ಭಾವವಿಲ್ಲದೆ ಕಳೆದ ವರ್ಷದಂತೆ ದರ್ಶನ ಸಿಗುವಂತೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ.ಇದನ್ನು ಓದಿ –ಕೆಂಪೇಗೌಡ ಜಯಂತಿ ಪ್ರಚಾರ ರಥಕ್ಕೆ ಅದ್ಧೂರಿ ಚಾಲನೆ

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿ ಪ್ರಜೀಶ್.ಪಿ, ಲಕ್ಷ್ಮೀದೇವಿ, ಪ್ರಭುಶಂಕರ್, ಶಿವಲಿಂಗಯ್ಯ, ಕೇಬಲ್ ರಮೇಶ್ , ಸಿಂಧುವಳ್ಳಿ ಶಿವಕುಮಾರ್, ಕೃಷ್ಣೆಗೌಡ, ಮಧುವನ ಚಂದ್ರು, ಬೋಗಾದಿ ಸಿದ್ದೇಗೌಡ, ಡಾ. ಶಾಂತರಾಜೇ ಅರಸ್, ಲಕ್ಷ್ಮಿ, ನೇಹಾ , ಹನುಮಂತಯ್ಯ, ಭಾಗ್ಯಮ್ಮ, ಕುಮಾರ್ , ಪದ್ಮ , ನಾಗರಾಜ್,  ರಾಧಾಕೃಷ್ಣ, ಮೂರ್ತಿ ಲಿಂಗಯ್ಯ, ಬಸವರಾಜ್, ಕುಮಾರ್, ಗಣೇಶ್ ಪ್ರಸಾದ್, ರವಿ ನಾಯಕ್ , ಪ್ರದೀಪ್, ಪ್ರಭಾಕರ್,  ವಿಷ್ಣು ಮುಂತಾದವರು ಉಪಸ್ಥಿತರಿದ್ದರು ‌.

  • ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ
    by Team Varthaman
    August 7, 2025
  • ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರ ದುರ್ಮರಣ
    by Team Varthaman
    August 7, 2025
  • ಶಾಲೆಗೆ ಮನೋವೈದ್ಯ ಮನೆಗೆ ಅಜ್ಜಿ-ತಾತ ಬೇಕು
    by Team Varthaman
    August 7, 2025
  • SBI ಬ್ಯಾಂಕ್‌ನಲ್ಲಿ 6589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ
    by Team Varthaman
    August 7, 2025
  • ಇಂದಿನ ಚಿನ್ನದ ಬೆಲೆ ತಿಳಿಯಿರಿ | Gold Price in India
    by Team Varthaman
    August 6, 2025

ಮೇ 24 ರಂದು ಸಿಇಟಿ ಫಲಿತಾಂಶ ಪ್ರಕಟ

ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ: ಅಗತ್ಯ ವಸ್ತುಗಳ ಮೇಲಿನ GST ಇಳಿಕೆ ಸಾಧ್ಯತೆ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: 27ಕ್ಕೂ ಹೆಚ್ಚು ಪ್ರವಾಸಿಗರ ಹತ್ಯೆ, ದೇಶಾದ್ಯಂತ ಆಕ್ರೋಶ

IPL ಮ್ಯಾಚ್ ಫಿಕ್ಸಿಂಗ್ ಭೀತಿಗೆ BCCI ಎಚ್ಚರಿಕೆ – ಹೈದ್ರಾಬಾದ್ ಉದ್ಯಮಿಯ ವಿರುದ್ಧ ಶಂಕೆ

ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಹನನಕ್ಕೆ ಖಂಡನೆ

TAGGED:Chamundi BettalatestnewsMysore Newsservice feeಚಾಮುಂಡೇಶ್ವರಿ ಬೆಟ್ಟ
Share This Article
Facebook Email Print
Leave a comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main NewsTrending

ಅರಮನೆ ಮೈದಾನ ಭೂಮಿಗೆ 3,400 ಕೋಟಿ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶ

Team Varthaman Team Varthaman May 22, 2025
ಕಾಲ್ತುಳಿತ ದುರಂತ: ಮೃತರ ಕುಟುಂಬಗಳಿಗೆ RCB ಹಾಗೂ KSCA ಯಿಂದ ಒಟ್ಟು ₹25 ಲಕ್ಷ ಪರಿಹಾರ
ಮಂಡ್ಯ: ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು
ಒಂದು ವಾರದಲ್ಲಿ ಕಾವೇರಿ ಆರತಿಯ ನೀಲನಕ್ಷೆ ಸಿದ್ಧವಾಗಲಿದೆ – ಡಿಸಿಎಂ ಡಿ.ಕೆ. ಶಿವಕುಮಾರ್
1.25 ಲಕ್ಷ ಲಂಚ ಪಡೆಯುತ್ತಿದ್ದ ಮಹಿಳಾ PSI ಲೋಕಾಯುಕ್ತ ಬಲೆಗೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • National News
  • Politics
  • IPL 2025
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?