ಕೋಲಾರ: ಮೂಲಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಹುದ್ದೆಯ ದುರುಪಯೋಗಕ್ಕೆ ಸಂಬಂಧಿಸಿದ ಘಟನೆ ನಡೆದಿದೆ. ಬಾರ್ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ನಂಗಲಿ ಠಾಣೆಯ ಪಿಎಸ್ಐ (ಉಪನಿರೀಕ್ಷಕ) ಅರ್ಜುನ್ ಗೌಡ ಹಾಗೂ ಕಾನ್ಸ್ಟೇಬಲ್ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಾರ್ ಮಾಲೀಕ ಪ್ರಶಾಂತ್ ಬಳಿ ₹50,000 ಲಂಚಕ್ಕೆ ಬೇಡಿಕೆ ಇಡಲಾಗಿದ್ದೆಂದು ಮೂಲಗಳು ತಿಳಿಸಿವೆ. ಈ ಪೈಕಿ ಮುಂಗಡವಾಗಿ ₹20,000 ಪಡೆಯುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಪಿಎಸ್ಐ ಅರ್ಜುನ್ ಗೌಡನನ್ನು ರೆಡ್ ಹ್ಯಾಂಡ್ ಹಿಡಿದುಕೊಂಡಿದ್ದಾರೆ.
ಸ್ಥಳದಲ್ಲಿದ್ದ ಕಾನ್ಸ್ಟೇಬಲ್ ಸುರೇಶ್ ಕೂಡಾ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ.ಇದನ್ನು ಓದಿ –CETನಲ್ಲಿ ಕಡಿಮೆ ಅಂಕ: ಮಗಳು ಹಾಗೂ ತಾಯಿ ಆತ್ಮಹತ್ಯೆಗೆ ಶರಣು
ಲೋಕ್ಪಾಲ ಅಧಿಕಾರಿಗಳಿಂದ ನಡೆಯಿದ ಈ ಕಾರ್ಯಾಚರಣೆಯ ನಂತರ, ಪಿಎಸ್ಐ ಅರ್ಜುನ್ ಗೌಡನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.