ಬೆಂಗಳೂರು, ಅಕ್ಟೋಬರ್ 30: 2025–26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಾರರ ಹೆಸರುಗಳನ್ನು ಪ್ರಕಟಿಸಿದರು. ಈ ಬಾರಿ ಅರ್ಜಿ ಆಹ್ವಾನಿಸದೇ ನೇರವಾಗಿ ರಾಜ್ಯ ಮಟ್ಟದ ಸಲಹಾ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಸಮಿತಿ ಹಲವು ಬಾರಿ ಸಭೆ ನಡೆಸಿ ಅರ್ಹರನ್ನು ಆರಿಸಿದೆ ಎಂದು ಹೇಳಿದರು.
ಈ ಬಾರಿ ಯಾವುದೇ ಸಂಘ–ಸಂಸ್ಥೆಗಳಿಗೆ ಪ್ರಶಸ್ತಿ ನೀಡದೆ, ಸಂಪೂರ್ಣವಾಗಿ ವೈಯಕ್ತಿಕ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದವರಲ್ಲಿ 12 ಮಂದಿ ಮಹಿಳೆಯರು ಸೇರಿದ್ದಾರೆ.
ಪ್ರಶಸ್ತಿ ಆಯ್ಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರತಿನಿಧಿತ್ವವನ್ನು ಪರಿಗಣಿಸಲಾಗಿದೆ.
ಪ್ರಮುಖ ಪ್ರಶಸ್ತಿ ಪುರಸ್ಕೃತರ ಪಟ್ಟಿ:
ಜಾನಪದ ಕ್ಷೇತ್ರ
• ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ
• ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ
• ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ
• ಹನುಮಂತಪ್ಪ ಮಾರಪ್ಪ ಚೀಳಂಗಿ – ಚಿತ್ರದುರ್ಗ
• ಎಂ. ತೋಪಣ್ಣ – ಕೋಲಾರ
• ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ
• ಸಿಂಧು ಗುಜರನ್ದ – ದಕ್ಷಿಣ ಕನ್ನಡ
• ಎಲ್. ಮಹದೇವಪ್ಪ ಉಡಿಗಾಲ – ಮೈಸೂರು
ಸಾಹಿತ್ಯ ಕ್ಷೇತ್ರ
• ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ
• ತುಂಬಾಡಿ ರಾಮಯ್ಯ – ತುಮಕೂರು
• ಪ್ರೊ. ಅರ್. ಸುನಂದಮ್ಮ – ಚಿಕ್ಕಬಳ್ಳಾಪುರ
• ಡಾ. ಎಚ್.ಎಲ್. ಪುಷ್ಪ – ತುಮಕೂರು
• ರಹಮತ್ ತರೀಕೆರೆ – ಚಿಕ್ಕಮಗಳೂರು
• ಹ.ಮ. ಪೂಜಾರ – ವಿಜಯಪುರ
ಚಲನಚಿತ್ರ / ಕಿರುತೆರೆ
• ಪ್ರಕಾಶ್ ರಾಜ್ – ದಕ್ಷಿಣ ಕನ್ನಡ
• ವಿಜಯಲಕ್ಷ್ಮೀ ಸಿಂಗ್ – ಕೊಡಗು
ಆಡಳಿತ
• ಹೆಚ್. ಸಿದ್ದಯ್ಯ (ಭಾ.ಆ.ಸೇ ನಿವೃತ್ತ) – ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
• ಆಲಮ್ಮ ಮಾರಣ್ಣ – ತುಮಕೂರು
• ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ
ಸಂಗೀತ
• ದೇವೇಂದ್ರಕುಮಾರ ಪತ್ತಾರ್ – ಕೊಪ್ಪಳ
• ಮಡಿವಾಳಯ್ಯ ಸಾಲಿ – ಬೀದರ್
ನೃತ್ಯ
• ಪ್ರೊ. ಕೆ. ರಾಮಮೂರ್ತಿ ರಾವ್ – ಮೈಸೂರು
ಸಮಾಜ ಸೇವೆ
• ಮತಿ ಸೂಲಗಿತ್ತಿ ಈರಮ್ಮ – ವಿಜಯನಗರ
• ಫಕ್ಕೀರಿ – ಬೆಂಗಳೂರು ಗ್ರಾಮಾಂತರ
• ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ
• ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ
• ಕೋಣಂದೂರು ಲಿಂಗಪ್ಪ – ಶಿವಮೊಗ್ಗ
• ಉಮೇಶ ಪಂಬದ – ದಕ್ಷಿಣ ಕನ್ನಡ
• ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ
• ಕೆ. ದಿನೇಶ್ – ಬೆಂಗಳೂರು
• ಶಾಂತರಾಜು – ತುಮಕೂರು
• ಜಾಫರ್ ಮೊಹಿಯುದ್ದೀನ್ – ರಾಯಚೂರು
• ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ
• ಬಾಯಿ ಬಳ್ಳಾರಿ
• ಪುಂಡಲೀಕ ಶಾಸ್ತ್ರೀ (ಬುಡಬುಡಕೆ) – ಬೆಳಗಾವಿ
ಹೊರನಾಡು / ಹೊರದೇಶ
• ಜಕರಿಯ ಬಜಪೆ – ಸೌದಿ ಅರೇಬಿಯಾ
• ಪಿ.ವಿ. ಶೆಟ್ಟಿ – ಮುಂಬೈ
ಪರಿಸರ
• ರಾಮೇಗೌಡ – ಚಾಮರಾಜನಗರ
• ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ
ಕೃಷಿ
• ಡಾ. ಎಸ್.ವಿ. ಹಿತ್ತಲಮನಿ – ಹಾವೇರಿ
• ಎಂ.ಸಿ. ರಂಗಸ್ವಾಮಿ – ಹಾಸನ
ಮಾಧ್ಯಮ
• ಕೆ. ಸುಬ್ರಮಣ್ಯ – ಬೆಂಗಳೂರು
• ಅಂಶಿ ಪ್ರಸನ್ನಕುಮಾರ್ – ಮೈಸೂರು
• ಬಿ.ಎಂ. ಹನೀಫ್ – ದಕ್ಷಿಣ ಕನ್ನಡ
• ಎಂ. ಸಿದ್ಧರಾಜು – ಮಂಡ್ಯ
• ರಾಮಯ್ಯ – ಚಿಕ್ಕಬಳ್ಳಾಪುರ
• ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ – ದಾವಣಗೆರೆ
• ಡಾ. ಆರ್.ವಿ. ನಾಡಗೌಡ – ಗದಗ
ಸಹಕಾರ
• ಶೇಖರಗೌಡ ವಿ. ಮಾಲಿಪಾಟೀಲ್ – ಕೊಪ್ಪಳ
ಯಕ್ಷಗಾನ
• ಕೋಟ ಸುರೇಶ್ ಬಂಗೇರ – ಉಡುಪಿ
• ಐರಬೈಲ್ ಆನಂದ ಶೆಟ್ಟಿ – ಉಡುಪಿ
• ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ. ಹೆಗಡೆ) – ಉತ್ತರ ಕನ್ನಡ
ಈ ಪ್ರಶಸ್ತಿ ಪ್ರಕಟಣೆಯಿಂದ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಸಾಧಕರ ಶ್ರಮಕ್ಕೆ ರಾಜ್ಯ ಸರ್ಕಾರದಿಂದ ಮಾನ್ಯತೆ ದೊರೆತಿದೆ.
ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡುವರು.








