ಮೈಸೂರು: ವೀರ ಚಂದ್ರಹಾಸ ಸಿನೆಮಾ ನಿರ್ದೇಶಕರಾದ ರವಿ ಬಸ್ರೂರು ಯಕ್ಷಗಾನ ವೇಷದಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದರು.
ಹೊಂಬಾಳೆ ಫಿಲಂಸ್ ಅರ್ಪಿಸುತ್ತಿರುವ ಸಂಗೀತ ನಿರ್ದೇಶಕ ರವಿ ಬಸ್ಸೂರು ನಿರ್ದೇಶನದ ದಕ್ಷಿಣ ಕನ್ನಡ ಭಾಗದ ಸಂಸ್ಕೃತಿಯ ಪ್ರತೀಕವಾದ ಯಕ್ಷಗಾನ ಕಲೆಯ ಹಿನ್ನೆಲೆ ಹಿರಿಮೆಯನ್ನು ನಾಡಿನ ಜನತೆಗೆ ಹೇಳಲು ಯಕ್ಷಗಾನ ಪ್ರಸಂಗ ಆಧಾರಿತ ವೀರಚಂದ್ರಹಾಸ ಚಿತ್ರ ರಾಜ್ಯಾದ್ಯಂತ ತೆರೆಕಂಡಿದ್ದು ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.
ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಚಿತ್ರತಂಡ ಭೇಟಿ ಕೊಟ್ಟಿದ್ದು, ರವಿ ಬಸ್ರೂರು ಅವರು ಯಕ್ಷಗಾನ ವೇಷದಲ್ಲಿ ದೇವಿಯ ದರ್ಶನ ಪಡೆದರು.
ಈ ವೇಳೆಯಲ್ಲಿ ರವಿ ಬಸ್ರೂರ್ ಮಾತನಾಡಿ,ವೀರ ಚಂದ್ರಹಾಸ ನಿನೆಮಾ ಮಾಡಬೇಕೆಂಬುವುದಯ ನನ್ನ ಹಲವು ವರ್ಷಗಳ ಕನಸು. ಯಕ್ಷಗಾನವನ್ನು ವಿಶ್ವಮಾನ್ಯ ಮಾಡಬೇಕೆಂದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ಎಲ್ಲಾ ಪಾತ್ರಗಳನ್ನು ನಿಜವಾದ ವೃತ್ತಿಪರ ಯಕ್ಷಗಾನ ಕಲಾವಿದರೆ ನಿರ್ವಹಿಸಿದ್ದಾರೆ. ಹಾಗಾಗಿ ಇಡಿ ಚಿತ್ರ ತುಂಬಾ ನೈಜ್ಯವಾಗಿ ಮೂಡಿಬಂದಿದೆ ಎಂದರು.ಇದನ್ನು ಓದಿ –ಸರಿಗಮಪ ಖ್ಯಾತ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ದೀರ್ಘಕಾಲದ ಸ್ನೇಹಿತನೊಂದಿಗೆ ವಿವಾಹ
ವಿಶೇಷ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಭಿನಯಿಸುವ ಮೂಲಕ ನಮಗೆ ಆಶೀರ್ವದಿಸಿದ್ದಾರೆ ಎಂದು ಹೇಳಿದರು. ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಅವಧೂತ ಅರ್ಜುನ್ ಗುರೂಜಿ ಅವರ ಆಶೀರ್ವಾದ ಪಡೆದು ಅವರ ಜೊತೆ ಡಿಆರ್.ಸಿ. ಮಾಲ್ ನಲ್ಲಿ ಪ್ರೇಕ್ಷಕರ ಜೊತೆ ಚಿತ್ರ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಲಾವಿದ ಪ್ರಕಾಶ್ ಚಿಕ್ಕಪಾಳ್ಯ, ಸಮಾಜ ಸೇವಕ ಜೋಗಿ ಮಂಜು, ರಿಷಿ ವಿಶ್ವಕರ್ಮ, ವಿಕ್ರಂ ಅಯ್ಯಂಗಾರ್, ಮಹಾನ್ ಶ್ರೇಯಸ್ ಇದ್ದರು.