ಭಾವನಾ ಲೋಕದ ಮಾಂತ್ರಿಕ , ಸೃಜನ ಶೀಲ ಕವಿ , ಕವಿ ಪುತಿನ ಟ್ರಸ್ಟ್ನ ಮಾಜಿ ಅಧ್ಯಕ್ಷ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ. ಇಹ ಲೋಕ ತ್ಯಜಿಸಿದರು.
ಕವಿತೆ, ನಾಟಕ, ಸಾಹಿತ್ಯಗಳನ್ನು ಕೊಡುಗೆಯಾಗಿ ನೀಡಿದ್ದ ಕವಿ ಹೆಚ್ಎಸ್ವಿ ಅಂತಲೇ ಇವರು ಚಿರಪರಿಚಿತರಾಗಿದ್ದ ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು, ಸಾಹಿತ್ಯಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.
ಹೆಚ್.ಎಸ್ ವೆಂಕಟೇಶಮೂರ್ತಿ ಅವರು ಕೆಲದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ನಾಲ್ವರು ಪುತ್ರರನ್ನು ಅಗಲಿದ್ದಾರೆ.
ಹೆಚ್.ಎಸ್. ವೆಂಕಟೇಶಮೂರ್ತಿ ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದುಕೊಂಡಿದ್ದರು.ಇದನ್ನು ಓದಿ – 9 ವರ್ಷಗಳ ನಂತರ ಫೈನಲ್ ತಲುಪಿದ RCB
ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ.