ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಐಪಿಎಲ್ 2024ರ ಚೊಚ್ಚಲ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ಇಂದು ಸಂಜೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ನಲ್ಲಿ ಸರಕಾರದ ವತಿಯಿಂದ ಅವರಿಗೆ ಅಧಿಕೃತ ಅಭಿನಂದನೆ ಸಲ್ಲಿಸಲಾಗುವುದು.
ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಧ್ಯಮದೊಂದಿಗೆ ಮಾತನಾಡಿ, ಭದ್ರತಾ ಕಾರಣಗಳಿಂದಾಗಿ ಆಟಗಾರರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದರು. “ಆರ್ಸಿಬಿ ಆಟಗಾರರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಬಗ್ಗೆ ಯಾವುದೇ ಯೋಜನೆ ಇಲ್ಲ. ಭದ್ರತಾ ವಿಷಯವನ್ನು ಪರಿಗಣಿಸಿ, ಮೆರವಣಿಗೆವನ್ನು ಕೈಬಿಡಲಾಗಿದೆ,” ಎಂದು ಹೇಳಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಮಾತ್ರ ಆರ್ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿದ್ದು, ತಂಡಕ್ಕೆ ಶುಭ ಹಾರೈಸಲಿದ್ದಾರೆ. ಆರ್ಸಿಬಿಯ ಪರವಾಗಿ ಒಬ್ಬ ಪ್ರತಿನಿಧಿ ಮಾತನಾಡಲಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.ಇದನ್ನು ಓದಿ –ಇಂದು ಬೆಂಗಳೂರಿನಲ್ಲಿ RCBಯ ವಿಜಯ ಮೆರವಣಿಗೆ
ಇನ್ನೊಂದೆಡೆ, ಈ ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆಯನ್ನು ಗೃಹ ಸಚಿವರು ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆಸಿದರು.