ಬೆಂಗಳೂರು: ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ಸಾರಿಗೆ ನೌಕರರು ಅರ್ಥಮಾಡಿಕೊಂಡು ಮುಷ್ಕರ ಕೈಬಿಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ಅಸ್ಸಾಂಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಸಾಧ್ಯವಾದ ಮಟ್ಟಿಗೆ ಸೌಲಭ್ಯ ನೀಡಿದೆ. ಈ ಪರಿಸ್ಥಿತಿಯಲ್ಲಿ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸುವುದು ಕಷ್ಟ. ಆದ್ದರಿಂದ ನೌಕರರು ಸಹಕಾರ ಮನೋಭಾವ ತೋರಬೇಕು ಎಂದು ಹೇಳಿದರು.
ಬೆಂಗಳೂರಿನ ಕಸದ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ಕಸ ನಿರ್ವಹಣೆ ಎಲ್ಲರ ಜವಾಬ್ದಾರಿ. ಡಂಪಿಂಗ್ ಯಾರ್ಡ್ಗೆ ವಿರೋಧ ವ್ಯಕ್ತಪಡಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಶಾಶ್ವತ ಪರಿಹಾರಕ್ಕಾಗಿ ನಾಲ್ಕು ಹೊಸ ಡಂಪಿಂಗ್ ಯಾರ್ಡ್ಗಳಿಗಾಗಿ ಜಾಗ ಹುಡುಕಲಾಗುತ್ತಿದೆ. ಎರಡು ಕಡೆ ಜಾಗ ಈಗಾಗಲೇ ಅಂತಿಮಗೊಂಡಿದೆ ಎಂದು ಮಾಹಿತಿ ನೀಡಿದರು. “ಇದು ಜನರ ಕಸ, ಅದನ್ನು ಎಲ್ಲಾದರೂ ವೈಜ್ಞಾನಿಕವಾಗಿ ವಿಲೇವಾರಿ ಮಾಡಲೇಬೇಕು” ಎಂದು ಹೇಳಿದರು.ಇದನ್ನು ಓದಿ –ಲಾರಿ–ಬೈಕ್ ಡಿಕ್ಕಿ: ಮೂವರು ಸಾವು
ಅಸ್ಸಾಂ ಚುನಾವಣೆಯ ಕುರಿತು ಮಾತನಾಡಿದ ಅವರು, ಈಗಾಗಲೇ ದೆಹಲಿಯಲ್ಲಿ ಹಲವು ಸಭೆಗಳು ನಡೆದಿವೆ. ಚುನಾವಣಾ ತಂತ್ರ ರೂಪಿಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವುದಾಗಿ ತಿಳಿಸಿದರು.








