ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಿನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ “ಮತ ಕಳ್ಳತನ”ದ ಮತ್ತೊಂದು ಆರೋಪವನ್ನು ಮಾಡಿದ್ದಾರೆ,
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಗಂಭೀರ ಆಪಾದನೆ ಮಾಡಿದ್ದಾರೆ.
ದೆಹಲಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅಮಾನ್ಯ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದಂತೆ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಹೇಳಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು. ಒಂದೇ ಫೋಟೋ ಬಳಸಿ ಹತ್ತು ಬೂತ್ಗಳಲ್ಲಿ 22 ಬಾರಿ ಮತ ಚಲಾಯಿಸಿದ ಬ್ರೆಜಿಲ್ ಮಾದರಿಯ ಉದಾಹರಣೆಯನ್ನೂ ಅವರು ನೀಡಿದರು. ಇದಕ್ಕಾಗಿ ಚುನಾವಣಾ ಆಯೋಗವು ಸಿಸಿಟಿವಿ ದಾಖಲೆಗಳನ್ನು ನಾಶಪಡಿಸುತ್ತದೆ ಎಂದು ಅವರು ಆರೋಪಿಸಿದರು.
ಕರ್ನಾಟಕದ ಆಳಂದ, ಮಹದೇವಪುರದಂತೆ ಹರಿಯಾಣದಲ್ಲಿ ಕೂಡ ಮತಗಳ್ಳತನ ನಡೆದಿದೆ ಒಂದೇ ವ್ಯಕ್ತಿ ಹಲವು ಕಡೆ ಮತದಾನ ಮಾಡಿರುವ ನಿದರ್ಶನಗಳಿವೆ. ಅದರಲ್ಲೂ ಬ್ರೆಜಿಲ್ ಮಾಡೆಲ್ ಫೋಟೊ ಬಳಸಿ 10 ಬೂತ್ ಗಳಲ್ಲಿ 22 ಹೆಸರಿನಲ್ಲಿ ಮತದಾನ ನಡೆದಿತ್ತು ಎಂದು ಹೇಳಿದ್ದಾರೆ. ಹರ್ಯಾಣದಲ್ಲ 25 ಲಕ್ಷ ಮತಗಳ್ಳತನವಾಗಿದೆ ಎಂದು ದೂರಿದ್ದಾರೆ.
ನಕಲಿ ಮತದಾರರು ಹರಿಯಾಣ ವಿಧಾನಸಭೆಯ ಚುನಾವಣಾ ಪಟ್ಟಿಯಲ್ಲಿ ನಕಲಿ ಫೋಟೋಗಳನ್ನು ಹೊಂದಿರುವ 1.24 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದರು. ನಾನು ಈ ಸಂದರ್ಭದಲ್ಲಿ ಚುನಾವಣಾ ಆಯೋಗವನ್ನು, ಭಾರತದಲ್ಲಿನ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದೇನೆ ಎಂದರು.
ನೂರಕ್ಕೆ ನೂರರಷ್ಟು ಸತ್ಯ
ಇಂದು ನಾನು ಮಾಡುತ್ತಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ. ವಿರೋಧ ಪಕ್ಷದ ನಾಯಕನಾಗಿ ಸಂಪೂರ್ಣ ಜವಾಬ್ದಾರಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದರು.
ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳ ಫಲಿತಾಂಶಗಳು ಹರಿಯಾಣ ಚುನಾವಣೆಯಲ್ಲಿನ ಇತರ ಮತಗಳಿಗಿಂತ ಭಿನ್ನವಾಗಿವೆ ಎಂದರು.
ಆಧಾರ ರಹಿತ ಆರೋಪ : ಚುನಾವಣಾ ಆಯೋಗ
ನಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು “ಆಧಾರರಹಿತ”. ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ
ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. 25 ಲಕ್ಷ ಮತದಾರರು “ನಕಲಿ” ಮತ್ತು ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರತಿಕ್ರಿಯಿಸುತ್ತಿದ್ದಾರೆ.ಇದನ್ನು ಓದಿ –ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಂಡ್ಯ ರೈತ ಸಾವು
2024ರ ಅಕ್ಟೋಬರ್ನಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಮತ ಚಲಾಯಿಸಿದ ಮತದಾರರನ್ನು ಕಾಂಗ್ರೆಸ್ನ ಬೂತ್ ಏಜೆಂಟ್ಗಳು ಏಕೆ ಗುರುತಿಸಲಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನಿಸಿದ್ದಾರೆ.








